ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm