ಬ್ರೇಕಿಂಗ್ ನ್ಯೂಸ್
23-06-21 12:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: "ಭಾರತದಲ್ಲಿ ಮುಂಬರುವ ಸಪ್ಟೆಂಬರ್ ತಿಂಗಳಿನಿಂದ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುವುದು," ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಕೊರೊನಾವೈರಸ್ ಟಾಸ್ಕ್ ಫೋರ್ಸ್ ತಂಡದಲ್ಲಿ ಪ್ರಮುಖರು ಎನಿಸಿರುವ ಖ್ಯಾತ ಶ್ವಾಸಕೋಶಶಾಸ್ತ್ರಜ್ಞ ಡಾ.ರಂದೀಪ್ ಗುಲೇರಿಯಾ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಭಾರತ್ ಬಯೋಟೆಕ್ ಮಕ್ಕಳ ಮೇಲೆ ನಡೆಸುತ್ತಿರುವ ವೈದ್ಯಕೀಯ ಪ್ರಯೋಗದ ಅಧಿಕೃತ ದತ್ತಾಂಶ ಸಪ್ಟೆಂಬರ್ ತಿಂಗಳ ಹೊತ್ತಿಗೆ ಹೊರ ಬರಲಿದೆ. ಅದೇ ತಿಂಗಳು ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ವಿತರಣೆಗೆ ಅನುಮೋದನೆ ಪಡೆದುಕೊಂಡು ಲಸಿಕೆ ವಿತರಣೆ ಕಾರ್ಯ ಆರಂಭಿಸಲಾಗುವುದು," ಎಂದಿದ್ದಾರೆ.


ಮುಂದಿನ ದಿನಗಳಲ್ಲಿ ಒಂದು ವೇಳೆ ಫೈಜರ್-ಬಯೋ-ಎನ್-ಟೆಕ್ ಸಂಸ್ಥೆಯ ಕೊರೊನಾವೈರಸ್ ಲಸಿಕೆಗೆ ಅನುಮೋದನೆ ನೀಡಿದ್ದೆ ಆದರೆ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೂ ಈ ಲಸಿಕೆಯನ್ನು ವಿತರಿಸುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ಕೊವ್ಯಾಕ್ಸಿನ್ ಲಸಿಕೆಯ ಎರಡು ಮತ್ತು ಮೂರನೇ ಹಂತದ ವೈದ್ಯಕೀಯ ಪ್ರಯೋಗಗಳನ್ನು ಮಕ್ಕಳು ಮತ್ತು ಯುವಕರ ಮೇಲೆ ನಡೆಸುವುದಕ್ಕೆ ಭಾರತದ ಔಷಧೀಯ ನಿಯಂತ್ರಣ ಪ್ರಾಧಿಕಾರ ಕಳೆದ ಮೇ 12ರಂದು ಭಾರತ್ ಬಯೋಟೆಕ್ ಸಂಸ್ಥೆಗೆ ಅನುಮೋದನೆ ನೀಡಿತ್ತು. ಜೂನ್ 7ರಿಂದ ನವದೆಹಲಿ ಏಮ್ಸ್ 2 ರಿಂದ 17 ವರ್ಷದ ಮಕ್ಕಳ ಮೇಲೆ ವೈದ್ಯಕೀಯ ಪ್ರಯೋಗವನ್ನು ಆರಂಭಿಸಿತ್ತು.


"ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಶಾಲೆಗಳ ಪುನಾರಂಭಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಾಲೆಗಳನ್ನು ಆರಂಭಿಸುವುದರಿಂದ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚುವ ಅಪಾಯವಿದೆ. ಈ ಹಿನ್ನೆಲೆ ತೆರೆದ ಪ್ರದೇಶಗಳಲ್ಲಿ ತರಗತಿಗಳನ್ನು ನಡೆಸುವುದು ಸೂಕ್ತವಾಗಿದೆ. ಬಯಲು ಪರಿಸರದಲ್ಲಿ ಸೋಂಕು ಹರಡುವಿಕೆ ಅಪಾಯ ಅಷ್ಟಾಗಿ ಇರುವುದಿಲ್ಲ," ಎಂದು ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.
"ಮಕ್ಕಳಲ್ಲಿ ಪ್ರತಿಕಾಯ ಶಕ್ತಿ ವೃದ್ಧಿಸುವುದಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದನ್ನು ಸೆರೋ-ಸಮೀಕ್ಷೆಯಲ್ಲಿ ಗುರುತಿಸಲಾಗಿದೆ. ಅಲ್ಲದೇ, ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವಂತಾ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ, ಎಂದು ಡಾ. ರಂದೀಪ್ ಗುಲೇರಿಯಾ ಸ್ಪಷ್ಟಪಡಿಸಿದ್ದಾರೆ. "ಮಕ್ಕಳನ್ನು ವೈದ್ಯಕೀಯ ಪ್ರಯೋಗದಲ್ಲಿ ಬಳಸಿಕೊಂಡ ಸಂದರ್ಭದಲ್ಲಿ ಅವರಲ್ಲೂ ಪ್ರತಿಕಾಯ ಶಕ್ತಿ ವೃದ್ಧಿಸುವುದನ್ನು ಕಂಡುಕೊಳ್ಳಲಾಗಿದೆ," ಎಂದಿದ್ದಾರೆ.
AIIMS director Dr Randeep Guleria said data Covaxin’s phase 2 and 3 trials for children would be made available by September, adding that the vaccine itself could be approved in the same month.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am