ಬ್ರೇಕಿಂಗ್ ನ್ಯೂಸ್
23-06-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ದೇಶ ಬಿಟ್ಟು ಓಡಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರಿಗೆ ಸೇರಿದ ವಿವಿಧ ಕಡೆ ಇರುವ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಈಗಾಗ್ಲೇ 18,170 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದು, ಒಟ್ಟು ಸಾಲ ಬಾಬ್ತು ಮೌಲ್ಯದ 80 ಶೇಕಡಾ ಆಸ್ತಿಯನ್ನು ಜಪ್ತಿ ಮಾಡಿದಂತಾಗಿದೆ. ಇದರ ಭಾಗವಾಗಿ ಜಪ್ತಿ ಮಾಡಿರುವ ಆಸ್ತಿಯ ಒಟ್ಟು ಮೌಲ್ಯದ ಅರ್ಧದಷ್ಟನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಬ್ಯಾಂಕುಗಳಿಗೆ ಮರು ಪಾವತಿ ಮಾಡಿದ್ದಾರೆ.
ಸಾಲ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮತ್ತು ಕೇಂದ್ರ ಸರಕಾರಕ್ಕೆ 9317 ಕೋಟಿ ರೂಪಾಯಿ ಮೊತ್ತವನ್ನು ಜಮಾ ಮಾಡಿದ್ದೇವೆ ಎಂದು ಇಡಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಪ್ರತ್ಯೇಕವಾಗಿ ಒಟ್ಟು 22,585 ಕೋಟಿ ರೂ. ಸಾಲವನ್ನು ವಿವಿಧ ಬ್ಯಾಂಕುಗಳಿಂದ ಪಡೆದಿದ್ದು ಆಬಳಿಕ ಪಾವತಿಸದೆ ಮೋಸ ಮಾಡಿದ್ದರು. ಈ ಪೈಕಿ 18 ಸಾವಿರ ಕೋಟಿಯಷ್ಟು ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ದೇಶದ ವಿವಿಧ ಕಡೆಗಳಿಂದ ವಶಕ್ಕೆ ಪಡೆದಿದ್ದಾರೆ.


ನ್ಯಾಯಾಲಯದ ಆದೇಶ ಪ್ರಕಾರ, ಇಂದಿನ ವರೆಗೆ 8441 ಕೋಟಿ ರೂ. ಮೊತ್ತದ ಆಸ್ತಿಯನ್ನು ಬ್ಯಾಂಕುಗಳಿಗೆ ವರ್ಗಾಯಿಸಲಾಗಿದೆ. ಅಲ್ಲದೆ, ಜೂನ್ 25ರ ಒಳಗೆ ಮತ್ತೆ ರೂ. 800 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುತ್ತೇವೆ. ಇದೇ ವೇಳೆ, ಷೇರು ಮೌಲ್ಯದ ಆಸ್ತಿಯನ್ನೂ ಸೇಲ್ ಮಾಡಿ ಮತ್ತೆ 800 ರೂ. ಮೊತ್ತವನ್ನು ಬ್ಯಾಂಕಿಗೆ ವರ್ಗಾಯಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಸ್ಪೆಷಲ್ ಕೋರ್ಟ್ ಆದೇಶದಂತೆ, ಸಾಲ ವಸೂಲಾತಿ ಪ್ರಾಧಿಕಾರವು ಈಗಾಗ್ಲೇ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 5800 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಇಡಿಗೆ ವರ್ಗಾಯಿಸಿತ್ತು. ಇಡಿ ಅಧಿಕಾರಿಗಳು ಅದನ್ನೀಗ ಆಯಾ ಬ್ಯಾಂಕುಗಳಿಗೆ ಮರು ಪಾವತಿ ಮಾಡುತ್ತಿದ್ದಾರೆ.
Assets worth ₹ 9,371 crores belonging to fugitive businessmen Vijay Mallya, Nirav Modi, Mehul Choksi have been transferred by the Enforcement Directorate to state-run banks that will help them recover losses on account of the fraud.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm