ಬ್ರೇಕಿಂಗ್ ನ್ಯೂಸ್
23-06-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ದೇಶ ಬಿಟ್ಟು ಓಡಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರಿಗೆ ಸೇರಿದ ವಿವಿಧ ಕಡೆ ಇರುವ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಈಗಾಗ್ಲೇ 18,170 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದು, ಒಟ್ಟು ಸಾಲ ಬಾಬ್ತು ಮೌಲ್ಯದ 80 ಶೇಕಡಾ ಆಸ್ತಿಯನ್ನು ಜಪ್ತಿ ಮಾಡಿದಂತಾಗಿದೆ. ಇದರ ಭಾಗವಾಗಿ ಜಪ್ತಿ ಮಾಡಿರುವ ಆಸ್ತಿಯ ಒಟ್ಟು ಮೌಲ್ಯದ ಅರ್ಧದಷ್ಟನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಬ್ಯಾಂಕುಗಳಿಗೆ ಮರು ಪಾವತಿ ಮಾಡಿದ್ದಾರೆ.
ಸಾಲ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮತ್ತು ಕೇಂದ್ರ ಸರಕಾರಕ್ಕೆ 9317 ಕೋಟಿ ರೂಪಾಯಿ ಮೊತ್ತವನ್ನು ಜಮಾ ಮಾಡಿದ್ದೇವೆ ಎಂದು ಇಡಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಪ್ರತ್ಯೇಕವಾಗಿ ಒಟ್ಟು 22,585 ಕೋಟಿ ರೂ. ಸಾಲವನ್ನು ವಿವಿಧ ಬ್ಯಾಂಕುಗಳಿಂದ ಪಡೆದಿದ್ದು ಆಬಳಿಕ ಪಾವತಿಸದೆ ಮೋಸ ಮಾಡಿದ್ದರು. ಈ ಪೈಕಿ 18 ಸಾವಿರ ಕೋಟಿಯಷ್ಟು ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ದೇಶದ ವಿವಿಧ ಕಡೆಗಳಿಂದ ವಶಕ್ಕೆ ಪಡೆದಿದ್ದಾರೆ.


ನ್ಯಾಯಾಲಯದ ಆದೇಶ ಪ್ರಕಾರ, ಇಂದಿನ ವರೆಗೆ 8441 ಕೋಟಿ ರೂ. ಮೊತ್ತದ ಆಸ್ತಿಯನ್ನು ಬ್ಯಾಂಕುಗಳಿಗೆ ವರ್ಗಾಯಿಸಲಾಗಿದೆ. ಅಲ್ಲದೆ, ಜೂನ್ 25ರ ಒಳಗೆ ಮತ್ತೆ ರೂ. 800 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುತ್ತೇವೆ. ಇದೇ ವೇಳೆ, ಷೇರು ಮೌಲ್ಯದ ಆಸ್ತಿಯನ್ನೂ ಸೇಲ್ ಮಾಡಿ ಮತ್ತೆ 800 ರೂ. ಮೊತ್ತವನ್ನು ಬ್ಯಾಂಕಿಗೆ ವರ್ಗಾಯಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಸ್ಪೆಷಲ್ ಕೋರ್ಟ್ ಆದೇಶದಂತೆ, ಸಾಲ ವಸೂಲಾತಿ ಪ್ರಾಧಿಕಾರವು ಈಗಾಗ್ಲೇ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 5800 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಇಡಿಗೆ ವರ್ಗಾಯಿಸಿತ್ತು. ಇಡಿ ಅಧಿಕಾರಿಗಳು ಅದನ್ನೀಗ ಆಯಾ ಬ್ಯಾಂಕುಗಳಿಗೆ ಮರು ಪಾವತಿ ಮಾಡುತ್ತಿದ್ದಾರೆ.
Assets worth ₹ 9,371 crores belonging to fugitive businessmen Vijay Mallya, Nirav Modi, Mehul Choksi have been transferred by the Enforcement Directorate to state-run banks that will help them recover losses on account of the fraud.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm