ಬ್ರೇಕಿಂಗ್ ನ್ಯೂಸ್
24-06-21 11:51 am Headline Karnataka News Network ದೇಶ - ವಿದೇಶ
ಕೋವಿಡ್ ಆತಂಕದಿಂದ ಆಟೋ ಉದ್ಯಮವು ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೊಸ ವಾಹನ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಇದರ ನಡುವೆ ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ವಾಹನಗಳ ಮುಖ ಮಾಡುತ್ತಿದ್ದಾರೆ.
ಕರೋನಾ ವೈರಸ್ನಿಂದಾಗಿ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಹಲವು ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಸದ್ಯ ಕರೋನಾ ವೈರಸ್ 2ನೇ ಅಲೆಯ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.
ಹೊಸ ವಾಹನಗಳ ಬೇಡಿಕೆಯಿಲ್ಲದಿರುವುದರಿಂದ ಹೊಸ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಹಲವು ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಗಮನಹರಿಸುತ್ತಿವೆ.
ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ಕಂಪನಿಗಳ ಕಾರು ಮಾರಾಟದಲ್ಲಿ ಶೇ. 40ರಿಂದ ಶೇ.60ರಷ್ಟು ಕುಸಿತ ಕಂಡುಬಂದಿದೆ.


ಹೊಸ ಕಾರುಗಳು ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಂಪನಿ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತಿವೆ.
ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಗ್ರಾಹಕರಿಗೆ ತಲುಪಿಸುವ ಯೋಜನೆಯಲ್ಲಿವೆ.

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.
ಈ ನಿಟ್ಟಿನಲ್ಲಿ ಮಹೀಂದ್ರಾ ಕಂಪನಿಯು ಫಸ್ಟ್ ಛಾಯ್ಸ್, ಮಾರುತಿ ಸುಜುಕಿ ಟ್ರೂ ವ್ಯಾಲ್ಯೂ ಸೇರಿದಂತೆ ಪ್ರಮುಖ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳು ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.
Second-hand vehicle business on high speed in India amid Covid 19 pandemic
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm