ಬ್ರೇಕಿಂಗ್ ನ್ಯೂಸ್
26-06-21 12:46 pm Headline Karnataka News Network ದೇಶ - ವಿದೇಶ
ರಾಯಗಢ, ಜೂನ್ 26: ವ್ಯಾಕ್ಸಿನ್ ಕಾರಣದಿಂದ ಕುವೈಟಿಗೆ ತೆರಳಲು ವೀಸಾ ಸಿಗಲಿಲ್ಲ ಎಂಬ ಚಿಂತೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಿರಾಜ್ ಮಾಪ್ಕರ್ ಎಂದು ಗುರುತಿಸಲಾಗಿದೆ.
ಕುವೈಟಿನಲ್ಲಿ ತೈಲ ಕಂಪನಿಯಲ್ಲಿ ಕೆಲಸಕ್ಕಿದ್ದ 45 ವರ್ಷದ ಸಿರಾಜ್ ಮಾಪ್ಕರ್ ಕಳೆದ ಮಾರ್ಚ್ ತಿಂಗಳಲ್ಲಿ ರಜೆಯ ನಿಮಿತ್ತ ಊರಿಗೆ ಬಂದಿದ್ದರು. ಬಳಿಕ ಕೋವಿಡ್ ಲಾಕ್ಡೌನ್ ಕಾರಣದಿಂದ ಇಲ್ಲೇ ಉಳಿದುಕೊಂಡಿದ್ದರು. ಕುವೈಟಿಗೆ ಮರಳುವ ಕಾರಣದಿಂದ ಬೇಗನೆ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರು. ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ ಸಿರಾಜ್ ಗೆ ಎರಡು ಡೋಸ್ ಕೂಡ ಆಗಿತ್ತು. ಆದರೆ, ಜೂನ್ ಆರಂಭದಲ್ಲಿ ಕುವೈಟಿಗೆ ಮರಳಲು ವೀಸಾಗೆ ಅರ್ಜಿ ಸಲ್ಲಿಸಿದಾಗ, ಕುವೈಟಿನಿಂದ ನಿರಾಕರಣೆ ಆಗಿತ್ತು.
ಕುವೈಟ್ ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ಇಲ್ಲದಿರುವುದರಿಂದ ವೀಸಾ ನಿರಾಕರಣೆ ಆಗಿತ್ತು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಸಿರಾಜ್, ತಾನಿನ್ನು ಕುವೈಟ್ ದೇಶಕ್ಕೆ ಹೋಗಲು ಸಾಧ್ಯವಾಗಲ್ಲ ಎಂದು ಚಿಂತೆಗೆ ಒಳಗಾಗಿದ್ದರು. ಅಲ್ಲದೆ, ಕುವೈಟಿಗೆ ತೆರಳಿ ತೀರಿಸುತ್ತೇನೆಂದು ಸಾಲವನ್ನೂ ಮಾಡಿಕೊಂಡಿದ್ದರು ಎಂದು ಸಿರಾಜ್ ಕುಟುಂಬಸ್ಥರು ತಿಳಿಸಿದ್ದಾರೆ.
ಕುವೈಟಿಗೆ ಬೇಗ ಹೋಗಬೇಕೆಂದು ಎರಡೂ ಡೋಸನ್ನು ಆದಷ್ಟುವ ಬೇಗ ಪಡೆದಿದ್ದರು. ಆದರೆ, ಇತ್ತೀಚೆಗೆ ಕೋವ್ಯಾಕ್ಸಿನ್ ಲಸಿಕೆ ಕುವೈಟಿನಲ್ಲಿ ಮಾನ್ಯತೆ ಇಲ್ಲವೆಂದು ಗೊತ್ತಾಗಿತ್ತು. ಆನಂತರ ಸಿರಾಜ್ ತೀವ್ರ ಚಿಂತೆಗೆ ಒಳಗಾಗಿದ್ದರು ಎಂದು ಅವರ ಸೋದರ ನಾಸಿರ್ ಹೇಳಿದ್ದಾರೆ.
Unable to fly back to Kuwait from Maharashtra, a man of Indian origin allegedly hanged himself to death. The man was unable to return to Kuwait as the COVID-19 vaccine he had taken is not valid in the Gulf country. The 45-year-old man took his life at his residence in Mahad city in Raigad district.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am