ಬ್ರೇಕಿಂಗ್ ನ್ಯೂಸ್
01-09-20 03:08 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ದೆಹಲಿಯ ಲೋಧಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನ ಅರ್ಪಿಸಲಾಯಿತು.
ಇದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಎಲ್ಲಾ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಂತಿಮ ದರ್ಶನ ಪಡೆದರು. ಈ ವೇಳೆ, ಮುಖಕ್ಕೆ ಮಾಸ್ಕ್, 6 ಅಡಿ ದೈಹಿಕ ಅಂತರ ಇತ್ಯಾದಿ ನಿಯಮಗಳ ಪಾಲನೆಯಾಗುವಂತೆ ಎಚ್ಚರ ವಿಸಲಾಗಿತ್ತು.



ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
ರಾಷ್ಟ್ರಪತಿಗಳಾಗುವ ಮುನ್ನ ಏಳು ಬಾರಿ ಸಂಸದರಾಗಿದ್ದ ಪ್ರಣಬ್ ಮುಖರ್ಜಿ ಅವರು ಹಲವು ಪ್ರಮುಖ ಖಾತೆಗಳನ್ನ ನಿಭಾಯಿಸಿದ್ದಾರೆ. ಹಣಕಾಸು ಖಾತೆ, ವಿದೇಶಾಂಗ ವ್ಯವಹಾರಗಳ ಖಾತೆ, ರಕ್ಷಣಾ ಖಾತೆಗಳನ್ನ ಅವರು ಸಮರ್ಥವಾಗಿ ನಿರ್ವಹಿಸಿದ್ದಾರೆ. ಅನೇಕ ಬಾರಿ ಅವರು ಪ್ರಧಾನಿ ಸ್ಥಾನಕ್ಕೂ ಪರಿಗಣಿತರಾಗಿದ್ದವರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm