ಬ್ರೇಕಿಂಗ್ ನ್ಯೂಸ್
29-06-21 12:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 29: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋನ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ವಹಿಸಿದೆ.
ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.





"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟವು ಭಾರತೀಯ ಭದ್ರತೆಗೊಂದು ಸವಾಲು ಎನ್ನುವಂತಿದೆ. ಸರ್ಕಾರದ ಭದ್ರತಾ ನಿಯೋಜನೆಯನ್ನೇ ಅದು ಪ್ರಶ್ನೆ ಮಾಡುವ ಮಟ್ಟಿಗಿದೆ. "ಡ್ರೋನ್ ಮೂಲಕ ಸ್ಫೋಟಕವನ್ನು ಭಾರತೀಯ ವಾಯುನೆಲೆ ನಿಯಂತ್ರಣದ ವಿಮಾನ ನಿಲ್ದಾಣದಲ್ಲಿ ಹಾಕಲಾಗುತ್ತದೆ ಎಂದರೆ ನಮ್ಮ ಭದ್ರತಾ ವ್ಯವಸ್ಥೆ ಬಗ್ಗೆ ಮರುಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ," ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ದೀಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ.
The government on Tuesday, June 29, 2021, handed over the probe into the drone attack on the Jammu air force station to the National Investigation Agency (NIA).
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm