ಬ್ರೇಕಿಂಗ್ ನ್ಯೂಸ್
29-06-21 01:17 pm Headline Karnataka News Network ದೇಶ - ವಿದೇಶ
Photo credits : ANI @ ANI
ಹಿಮಾಚಲ ಪ್ರದೇಶ, ಜೂನ್ 29: ಪಿಕಪ್ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಶಿಲ್ಲೈ ಉಪವಿಭಾಗದ, ಪಾವೊಂಟಾ ಸಾಹಿಬ್ ಗಡಿ ಬಳಿ ಇರುವ ಪಾಶೋಗ್ ಬಳಿ ನಿಯಂತ್ರಣ ಕಳೆದುಕೊಂಡ ಪಿಕಪ್ ಕಮರಿಗೆ ಬಿದ್ದಿದೆ ಎಂದು ಪಾವೊಂಟಾ ಪೊಲೀಸ್ ಅಧಿಕಾರಿ ಬೀರ್ ಬಹದ್ದೂರ್ ಹೇಳಿದ್ದಾರೆ. ಹಾಗೇ, ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇನ್ನು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಸಿರ್ಮೌರ್ ಅಪಘಾತದ ವಿಷಯ ಕೇಳಿ ತುಂಬ ನೋವಾಯಿತು. ಮೃತರ ಕುಟುಂಬಗಳಿಗೆ ಸಾಂತ್ವನಗಳು. ಹಾಗೇ, ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ಹಾರೈಸುತ್ತೇವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು. ಹಾಗೇ, ಗಾಯಗೊಂಡವರಿಗೆ ತಲಾ 50 ಸಾವಿರ ರೂ.ಕೊಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾಗಿ ಟ್ವೀಟ್ನಲ್ಲಿ ಹೇಳಲಾಗಿದೆ.
Nine people died and three others were injured as a vehicle fell into a deep gorge in Himachal Pradesh’s Sirmaur district on Monday, an official said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm