ಬ್ರೇಕಿಂಗ್ ನ್ಯೂಸ್
01-07-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 1: ಜಮ್ಮುವಿನ ವಾಯುನೆಲೆಗೆ ಡ್ರೋಣ್ ದಾಳಿ ನಡೆಸಿದ ಬೆನ್ನಲ್ಲೇ ದೇಶದಲ್ಲಿ ಡ್ರೋಣ್ ಬಳಕೆ ವಿಚಾರದಲ್ಲಿ ಕಟ್ಟುನಿಟ್ಟು ತರಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.



ಸಭೆಯಲ್ಲಿ ಭದ್ರತೆ ವಿಚಾರ ಮುಂದಿಟ್ಟು ಡ್ರೋಣ್ ನೀತಿಯನ್ನು ರೂಪಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಕುರಿತು ಮಾತುಕತೆ ನಡೆಸಿದ್ದಾರೆ. ಜಮ್ಮು ವಾಯುನೆಲೆಯ ಮೇಲೆ ಡ್ರೋಣ್ ದಾಳಿ ಮತ್ತು ನಂತರದ ಘಟಾನವಳಿ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ. ನಾಗರಿಕ ಬಳಕೆಗಾಗಿ ಡ್ರೋಣ್ ಕ್ಯಾಮರಾ ಬಳಕೆ ಮತ್ತು ಅದರ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ಗಳ ಬಳಕೆಯ ಮೇಲೆ ನಿರ್ಬಂಧ ವಿಧಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.


ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿದ 2021 ರ ಮಾರ್ಗಸೂಚಿ ಪ್ರಕಾರ, 250 ಗ್ರಾಂ ಗಿಂತ ಕಡಿಮೆ ತೂಕದ ಡ್ರೋನ್ಗಳನ್ನು ಹಾರಲು ಯಾವುದೇ ಪರವಾನಗಿ ಅಥವಾ ಪರವಾನಗಿ ಅಗತ್ಯವಿಲ್ಲ. ಆದರೆ, ವಿಮಾನ ನಿಲ್ದಾಣ, ಬಂದರು ಸೇರಿದಂತೆ ಕೆಲವು ನಿರ್ಬಂಧಿತ ಪ್ರದೇಶಗಳಲ್ಲಿ ಡ್ರೋಣ್ ಹಾರಾಟಕ್ಕೆ ಅನುಮತಿ ಇಲ್ಲ.

ಜಮ್ಮುವಿನ ಐಎಎಫ್ ವಾಯುನೆಲೆಯ ಮೇಲೆ ಭಾನುವಾರ ನಸುಕಿನಲ್ಲಿ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸಿದ್ದರು. ಆರು ನಿಮಿಷಗಳ ಅಂತರದಲ್ಲಿ ಎರಡು ಬಾಂಬ್ ಬ್ಲಾಸ್ಟ್ ಆಗಿದ್ದು, ಇಬ್ಬರು ಯೋಧರು ಗಾಯಕ್ಕೆ ಒಳಗಾಗಿದ್ದರು. ಈ ದಾಳಿ, 2016ರ ಪಠಾಣ್ ಕೋಟ್ ವಾಯನೆಲೆ ದಾಳಿಯ ಮುಂದುವರಿಕೆ ಎನ್ನಲಾಗುತ್ತಿದ್ದು, ಇದರ ಹಿಂದೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡ ಇರುವ ಶಂಕೆ ಇದೆ ಎಂದು ಗುಪ್ತಚರ ಇಲಾಖೆ ಉನ್ನತ ಮೂಲಗಳು ತಿಳಿಸಿದ್ದವು. ಇದರ ಬೆನ್ನಿಗೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು.
ಇದರ ಬೆನ್ನಲ್ಲೇ ಒಂದು ದಿನದ ನಂತರ, ಜಮ್ಮು ಸೇನಾ ನೆಲೆಯ ಬಳಿ ಮತ್ತೆರಡು ಡ್ರೋಣ್ ಬಂದಿದ್ದು ಅವನ್ನು ಸೈನಿಕರು ಹೊಡೆದುರುಳಿಸಿದ್ದರು. ಈ ಹಿನ್ನೆಲೆಯಲ್ಲಿ ಡ್ರೋಣ್ ಬಳಕೆ ಮತ್ತು ಅದರ ಮೇಲೆ ದೇಶಾದ್ಯಂತ ಕಣ್ಣಿಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
Prime Minister Narendra Modi Tuesday chaired a high-level meeting with Defence Minister Rajnath Singh, Union Home Minister Amit Shah, and NSA Ajit Doval on “futuristic challenges” in the defense sector. A discussion on equipping Indian armed forces with modern pieces of equipment was also held during the meeting.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm