ಬ್ರೇಕಿಂಗ್ ನ್ಯೂಸ್
03-07-21 05:12 pm Headline Karnataka News Network ದೇಶ - ವಿದೇಶ
ಮುಂಬೈ, ಜುಲೈ 3 : ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು. ಅವರಿಗೆ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಪುಕ್ಕಟೆಯಾಗಿ ಪೂರೈಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ನಿರಾಶ್ರಿತರು, ಭಿಕ್ಷುಕರ ಸಮಸ್ಯೆಗಳಿಗೆ ಸಂಬಂಧಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರ ವಿಭಾಗೀಯ ಪೀಠ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.


ನಿರಾಶ್ರಿತರು ಮತ್ತು ಭಿಕ್ಷುಕರಿಗೆ ಪ್ರತಿ ದಿನ ಮೂರು ಹೊತ್ತು ಪೌಷ್ಟಿಕಾಂಶಯುಕ್ತ ಆಹಾರ, ಕುಡಿಯುವ ನೀರು, ವಸತಿ ನೀಡಬೇಕು. ಜತೆಗೆ, ಸಾರ್ವಜನಿಕ ಶೌಚಾಲಯಗಳ ಉಚಿತ ಬಳಕೆಗೆ ಅನುಮತಿ ನೀಡುವಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ (ಬಿಎಂಸಿ) ನಿರ್ದೇಶಿಸುವಂತೆ ಕೋರಿ ಬ್ರಿಜೇಶ್ ಆರ್ಯ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಬಿಎಂಸಿ ಕೋರ್ಟಿಗೆ ಹೇಳಿಕೆ ನೀಡಿ, ಸ್ವಯಂಸೇವಾ ಸಂಸ್ಥೆಗಳ ನೆರವಿನಿಂದ ಮುಂಬೈ ಮಹಾನಗರದಲ್ಲಿರುವ ಈ ವರ್ಗದ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಿದ್ದೇವೆ. ಜೊತೆಗೆ ಈ ವರ್ಗದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ಗಳನ್ನೂ ವಿತರಿಸಲಾಗಿದೆ ಎಂದು ತಿಳಿಸಿತ್ತು.


ಈ ವಿಚಾರದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಪೀಠ, ಇಂಥ ವರ್ಗದವರಿಗೆ ಆಹಾರ ಪೂರೈಕೆ ಹೆಚ್ಚಿಸುವುದು ಸೇರಿದಂತೆ ಯಾವುದೇ ವಿಷಯದಲ್ಲೂ ನಿರ್ದೇಶನ ನೀಡುವ ಅಗತ್ಯವಿಲ್ಲ. ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಹಾಗೆಯೇ ನಿರಾಶ್ರಿತರು (ಮನೆ ಇಲ್ಲದವರು) ಕೂಡ ದೇಶಕ್ಕಾಗಿ ಕೆಲಸ ಮಾಡಬೇಕು. ಎಲ್ಲವನ್ನೂ ರಾಜ್ಯ ಸರ್ಕಾರ ಪೂರೈಸಬೇಕು ಎಂದು ಬಯಸುವುದು ಸರಿಯಲ್ಲ. ಇಂಥ ಮನವಿ ಸಲ್ಲಿಸುವ ಮೂಲಕ, ನೀವು (ಅರ್ಜಿದಾರರು) ಸಮಾಜದಲ್ಲಿ ಇಂಥ ವರ್ಗದ ಜನರ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೀರಿ ಎಂದು ಹೇಳಿದೆ.
ಇದೇ ವೇಳೆ 'ಅರ್ಜಿಯಲ್ಲಿರುವ ಎಲ್ಲ ಬೇಡಿಕೆಗಳಿಗೂ ಒಪ್ಪಿಗೆ ನೀಡಿದರೆ, ಜನರಿಗೆ ಕೆಲಸ ಮಾಡಬೇಡಿ ಎಂದು ಹೇಳಿದಂತಾಗುವುದಿಲ್ಲವೇ‘ ಎಂದು ನ್ಯಾಯಪೀಠ ಅರ್ಜಿದಾರರನ್ನೇ ಪ್ರಶ್ನಿಸಿತು.
The Bombay High Court on Saturday said that homeless persons and beggars should also work for the country as everything cannot be provided to them by the State.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am