ಬ್ರೇಕಿಂಗ್ ನ್ಯೂಸ್
03-07-21 05:12 pm Headline Karnataka News Network ದೇಶ - ವಿದೇಶ
ಮುಂಬೈ, ಜುಲೈ 3 : ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು. ಅವರಿಗೆ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಪುಕ್ಕಟೆಯಾಗಿ ಪೂರೈಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ನಿರಾಶ್ರಿತರು, ಭಿಕ್ಷುಕರ ಸಮಸ್ಯೆಗಳಿಗೆ ಸಂಬಂಧಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರ ವಿಭಾಗೀಯ ಪೀಠ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.


ನಿರಾಶ್ರಿತರು ಮತ್ತು ಭಿಕ್ಷುಕರಿಗೆ ಪ್ರತಿ ದಿನ ಮೂರು ಹೊತ್ತು ಪೌಷ್ಟಿಕಾಂಶಯುಕ್ತ ಆಹಾರ, ಕುಡಿಯುವ ನೀರು, ವಸತಿ ನೀಡಬೇಕು. ಜತೆಗೆ, ಸಾರ್ವಜನಿಕ ಶೌಚಾಲಯಗಳ ಉಚಿತ ಬಳಕೆಗೆ ಅನುಮತಿ ನೀಡುವಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ (ಬಿಎಂಸಿ) ನಿರ್ದೇಶಿಸುವಂತೆ ಕೋರಿ ಬ್ರಿಜೇಶ್ ಆರ್ಯ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಬಿಎಂಸಿ ಕೋರ್ಟಿಗೆ ಹೇಳಿಕೆ ನೀಡಿ, ಸ್ವಯಂಸೇವಾ ಸಂಸ್ಥೆಗಳ ನೆರವಿನಿಂದ ಮುಂಬೈ ಮಹಾನಗರದಲ್ಲಿರುವ ಈ ವರ್ಗದ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಿದ್ದೇವೆ. ಜೊತೆಗೆ ಈ ವರ್ಗದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ಗಳನ್ನೂ ವಿತರಿಸಲಾಗಿದೆ ಎಂದು ತಿಳಿಸಿತ್ತು.


ಈ ವಿಚಾರದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಪೀಠ, ಇಂಥ ವರ್ಗದವರಿಗೆ ಆಹಾರ ಪೂರೈಕೆ ಹೆಚ್ಚಿಸುವುದು ಸೇರಿದಂತೆ ಯಾವುದೇ ವಿಷಯದಲ್ಲೂ ನಿರ್ದೇಶನ ನೀಡುವ ಅಗತ್ಯವಿಲ್ಲ. ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಹಾಗೆಯೇ ನಿರಾಶ್ರಿತರು (ಮನೆ ಇಲ್ಲದವರು) ಕೂಡ ದೇಶಕ್ಕಾಗಿ ಕೆಲಸ ಮಾಡಬೇಕು. ಎಲ್ಲವನ್ನೂ ರಾಜ್ಯ ಸರ್ಕಾರ ಪೂರೈಸಬೇಕು ಎಂದು ಬಯಸುವುದು ಸರಿಯಲ್ಲ. ಇಂಥ ಮನವಿ ಸಲ್ಲಿಸುವ ಮೂಲಕ, ನೀವು (ಅರ್ಜಿದಾರರು) ಸಮಾಜದಲ್ಲಿ ಇಂಥ ವರ್ಗದ ಜನರ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೀರಿ ಎಂದು ಹೇಳಿದೆ.
ಇದೇ ವೇಳೆ 'ಅರ್ಜಿಯಲ್ಲಿರುವ ಎಲ್ಲ ಬೇಡಿಕೆಗಳಿಗೂ ಒಪ್ಪಿಗೆ ನೀಡಿದರೆ, ಜನರಿಗೆ ಕೆಲಸ ಮಾಡಬೇಡಿ ಎಂದು ಹೇಳಿದಂತಾಗುವುದಿಲ್ಲವೇ‘ ಎಂದು ನ್ಯಾಯಪೀಠ ಅರ್ಜಿದಾರರನ್ನೇ ಪ್ರಶ್ನಿಸಿತು.
The Bombay High Court on Saturday said that homeless persons and beggars should also work for the country as everything cannot be provided to them by the State.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm