ಬ್ರೇಕಿಂಗ್ ನ್ಯೂಸ್
04-07-21 03:58 pm Headline Karnataka News Network ದೇಶ - ವಿದೇಶ
ಪುಣೆ, ಜುಲೈ 4: ಮುಂಬೈ - ಪುಣೆ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂರೂವರೆ ವರ್ಷದ ಮಗು ಸೇರಿ ದಂಪತಿ ದಾರುಣ ಸಾವಿಗೀಡಾದ ಘಟನೆ ನಡೆದಿದೆ.
ರಾಯಗಢ ಜಿಲ್ಲೆಯ ಬೋರ್ಗಾಟ್ ಎಂಬಲ್ಲಿ ಅಪಘಾತ ನಡೆದಿದ್ದು ಕಂಟೇನರ್ ಲಾರಿ, ಟ್ರಕ್ ಮತ್ತು ಕಾರು ಸರಣಿಯಾಗಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಜೋಕಿಂ ಚೆಟ್ಟಿಯಾರ್(36), ಪತ್ನಿ ಲೂಸಿಯಾ(35), ಮತ್ತು ಇವರ ಮಗ ಮೂರುವರೆ ವರ್ಷದ ಜೈಸನ್ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಜೋಕಿಂ ಕುಟುಂಬದೊಂದಿಗೆ ಪುಣೆಯಲ್ಲಿ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿ ಶನಿವಾರ ಸಂಜೆ ತಮ್ಮ ಮನೆ ವಸಾಯಿ ಬಳಿಯ ನೈಗಾಂವ್ ಗೆ ಐಟ್ವೆಂಟಿ ಕಾರಿನಲ್ಲಿ ತೆರಳುತ್ತಿದ್ದರು. ಸಂಜೆ ಐದು ಗಂಟೆ ಸುಮಾರಿಗೆ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಬೋರ್ಗಾಟ್ ಏರಿಯಾದಲ್ಲಿ ಕ್ರಾಸ್ ಮಾಡಿಕೊಂಡು ಮತ್ತೊಂದು ಕಡೆಗೆ ತೆರಳಲು ನಿಂತಿದ್ದರು. ಕಾರನ್ನು ಕ್ರಾಸ್ ಮಾಡಲೆಂದು ಮುಂದಕ್ಕೆ ಚಲಿಸುತ್ತಿದ್ದಾಗ ಇನ್ನೊಂದು ಕಡೆಯಿಂದ ಬಂದ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿದ್ದ ಮತ್ತೊಂದು ಟ್ರಕ್ಕಿಗೆ ಡಿಕ್ಕಿಯಾಗಿದೆ. ಟ್ರಕ್ಕಿಗೆ ಬಡಿದ ರಭಸಕ್ಕೆ ಟ್ರಕ್ ಮುಂದಕ್ಕೆ ಬಂದಿದ್ದು ಜೋಕಿಂ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ.


ಡಿಕ್ಕಿಯಾದ ರಭಸಕ್ಕೆ ಕಾರು ರಸ್ತೆಯಲ್ಲೇ ಪಲ್ಟಿ ಹೊಡೆದಿದ್ದು ಕೆಲವೇ ಕ್ಷಣದಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಜ್ವಾಲೆಯ ಮಧ್ಯೆ ಕಾರಿನಲ್ಲಿದ್ದ ಮೂವರಿಗೆ ಹೊರಗೆ ಬರಲಾಗದೆ ಜೀವಂತ ದಹನವಾಗಿದ್ದಾರೆ.
ಕಂಟೇನರ್ ಲಾರಿಯ ಚಾಲಕ ರಮೇಶ್ ನಿಕಮ್ ಕೂಡ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಚಾಲಕ ರಮೇಶ್ ನಿಕ್ಕಂ ವಿರುದ್ಧ ನಿರ್ಲಕ್ಷ್ಯದ ಚಾಲನೆಯ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಪಘಾತದಿಂದಾಗಿ ಪುಣೆ - ಮುಂಬೈ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಬಳಿಕ ಮೂರೂ ವಾಹನಗಳನ್ನು ಕ್ರೇನ್ ಮೂಲಕ ಹೆದ್ದಾರಿಯಿಂದ ತೆರವುಗೊಳಿಸಿದ್ದಾರೆ.
This is shocking and very Sad. #mumbaipuneexpressway https://t.co/OP4swPVzwV
— 𝚂𝚊𝚖𝚖𝚛𝚒𝚍𝚑 𝚅𝚊𝚛𝚖𝚊 (@sammridh) July 3, 2021
A road trip proved fatal for three members of a family after their car got hit by a container truck that lost control on the Mumbai-Pune Expressway in Maharashtra. The accident, the visuals of which were captured by the rear camera of another truck that was in front of their Hyundai i10, involved the car getting caught between the two big vehicles and being run over on Thursday
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm