ಬ್ರೇಕಿಂಗ್ ನ್ಯೂಸ್
10-07-21 02:52 pm Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಜುಲೈ 10: ಮದುವೆಯಾಗುತ್ತಿಲ್ಲ ಎಂಬ ಖಿನ್ನತೆಯಲ್ಲಿದ್ದ ಮಹಿಳಾ ಸಬ್ಇನ್ಸ್ಪೆಕ್ಟರ್ವೋರ್ವಳು ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ರತಲಾಮ್ನಲ್ಲಿ ನಡೆದಿದೆ.
ಸಾವನ್ನಪ್ಪಿರುವ ಸಬ್ ಇನ್ಸ್ಪೆಕ್ಟರ್ 35 ವರ್ಷದ ಕವಿತಾ ಸೋಲಂಕಿ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ರಜೆಯಿಂದ ಮನೆಗೆ ಬಂದಿದ್ದ ಪೊಲೀಸ್ ಅಧಿಕಾರಿ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರ ಪ್ರಕಾರ ಮದುವೆಯಾಗದ ಕಾರಣದಿಂದಾಗಿ ಖಿನ್ನತೆಗೊಳಗಾಗಿದ್ದಳು ಎಂದು ತಿಳಿದು ಬಂದಿದೆ. ಜತೆಗೆ ಸಂಬಂಧಿಕರು ಮೇಲಿಂದ ಮೇಲೆ ಮದುವೆ ವಿಚಾರವಾಗಿ ಪ್ರಶ್ನೆ ಮಾಡುತ್ತಿದ್ದರು ಎನ್ನಲಾಗಿದೆ.

ಕವಿತಾ ಸೋಲಂಕಿ, ಮಧ್ಯಪ್ರದೇಶದ ರಾತಲಾಮ್ ಸ್ಟೇಷನ್ ರೋಡ್ನ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಹಾಯವಾಣಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ತೆರಳಿದ್ದ ಕವಿತಾ ಕೆಲ ದಿನ ಪೋಷಕರೊಂದಿಗೆ ಕಾಲ ಕಳೆದ ನಿನ್ನೆ ರತಲಾಮ್ಗೆ ವಾಪಸ್ ಆಗಿದ್ದರು.
ಪೊಲೀಸ್ ಇಲಾಖೆ ನೀಡಿದ್ದ ಕ್ವಾರ್ಟಸ್ನಲ್ಲಿ ಉಳಿದುಕೊಂಡಾಗ ವಿಷ ಸೇವಿಸಿದ್ದಾರೆ. ಇದರ ಬಗ್ಗೆ ಸಹದ್ಯೋಗಿಗೆ ಗೊತ್ತಾಗುತ್ತಿದ್ದಂತೆ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ, ವಯಸ್ಸಾಗಿದ್ದರಿಂದ ಮದುವೆಯಾಗಿರಲಿಲ್ಲ. ಹೀಗಾಗಿ ಬೇಸರಗೊಂಡಿದ್ದರು. ಜತೆಗೆ ಮದುವೆ ಬಗ್ಗೆ ಜನರು ಪ್ರಶ್ನೆ ಮಾಡ್ತಿದ್ದರಿಂದ ಖಿನ್ನತೆಗೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
A 35-year- old woman sub-inspector (SI) allegedly committed suicide by consuming a poisonous substance in Ratlam district, police said on Thursday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm