ಬ್ರೇಕಿಂಗ್ ನ್ಯೂಸ್
13-07-21 02:50 pm Headline Karnataka News Network ದೇಶ - ವಿದೇಶ
ಜೈಪುರ, ಜುಲೈ 13: ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್ಎ ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಗೋಮಾಂಸ ತಿನ್ನುವವರ ಡಿಎನ್ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ , ಎಲ್ಲ ಭಾರತೀಯರು ಒಂದೇ ಡಿಎನ್ಎ ಹಂಚಿಕೊಂಡಿರಬಹುದು. ಆದರೆ, ಗೋಮಾಂಸ ತಿನ್ನುವವರ ಡಿಎನ್ಎ ನಮ್ಮವರ ನಡುವೆ ಕಂಡುಬರಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಸಾಧ್ವಿ ಜನಸಂಖ್ಯೆ ನಿಯಂತ್ರಣ ಕ್ರಮಕ್ಕೂ ಒತ್ತಾಯಿಸಿದ್ದಾರೆ. 'ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಂದ ಮತ ಚಲಾಯಿಸುವ ಹಕ್ಕೂ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಹಿಂಪಡೆಯ ಬೇಕು' ಎಂದು ಆಗ್ರಹಿಸಿದ್ದಾರೆ.
'ನೀವು ಎಷ್ಟು ಪತ್ನಿಯರನ್ನು ಹೊಂದಿದ್ದೀರಿ ಎಂಬುದು ಮುಖ್ಯವಲ್ಲ, ಆದರೆ, ಇಬ್ಬರೇ ಮಕ್ಕಳಿರಬೇಕು ಎಂದು ಸಾಧ್ವಿ ಹೇಳಿದ್ದಾರೆ. ಲವ್ ಜಿಹಾದ್ ಬಗ್ಗೆಯೂ ಮಾತನಾಡಿದ ಅವರು, 'ರಾಜಸ್ಥಾನದಲ್ಲಿ ಪ್ರೇಮದ ಹೆಸರಿನಲ್ಲಿ ಲವ್ ಜಿಹಾದ್ ಮಾಡಲಾಗುತ್ತಿದ್ದು, ಹೆಣ್ಣು ಮಕ್ಕಳನ್ನು ಮೋಸ ಹಾಗೂ ಮತಾಂತರ ಮಾಡಲಾಗುತ್ತಿದೆ' ಎಂದು ಆರೋಪಿಸಿದ್ದಾರೆ.
'ಮತ ರಾಜಕೀಯವನ್ನು ಪಕ್ಕಕ್ಕಿಡಿ ಮತ್ತು ಹಿಂದು ಹೆಣ್ಣು ಮಕ್ಕಳ ರಕ್ಷಣೆಯತ್ತ ಗಮನಹರಿಸಿ' ಎನ್ನುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
Vishwa Hindu Parishad (VHP) leader Sadhvi Prachi is often in news for making statements. In a recent development, she has replied to Rashtriya Swayamsevak Sangh (RSS) chief Mohan Bhagwat's recent remark on DNA.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am