ಬ್ರೇಕಿಂಗ್ ನ್ಯೂಸ್
15-07-21 12:33 pm Headline Karnataka News Network ದೇಶ - ವಿದೇಶ
ಕಾರವಾರ, ಜುಲೈ 15; ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬುಧವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉತ್ತರ ಕನ್ನಡದ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ವರ್ತಿಕಾ ಕಟಿಯಾರ್ ಪಾತ್ರವಾಗಲಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಕೊಡಗು ಹಾಗೂ ಧಾರವಾಡ ಎಸ್ಪಿಯಾಗಿ, ಅಲ್ಲದೇ ಕೆಎಸ್ಆರ್ಪಿ ಸಂಶೋಧನಾ ಕೇಂದ್ರದ ಎಸ್ಪಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ರಾಜ್ಯ ಅಪರಾಧ ದಾಖಲೆಗಳ ವಿಭಾಗದಲ್ಲಿ (ಎಸ್ಸಿಬಿ) ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಹಾಲಿ ಎಸ್ಪಿ ಶಿವಪ್ರಕಾಶ್ ದೇವರಾಜುಗೆ ಸ್ಥಳ ನಿಯೋಜನೆ ಮಾಡಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ ಕರ್ತವ್ಯ ನಿರ್ವಹಿಸಿದ್ದರೆ, ಇದೀಗ ವರ್ತಿಕಾ ಕಟಿಯಾರ್ ಮೊದಲ ಮಹಿಳಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
The state government has posted Vartika Katiyar, IPS (RR 2010), as Superintendent of Police, Uttara Kannada, Karwar, while G Sangeetha, IPS (2011), has been posted as Superintendent of Police, Chamarajanagar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm