ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm