ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm