ಬ್ರೇಕಿಂಗ್ ನ್ಯೂಸ್
04-09-20 10:16 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್.3: ಚೀನಾ ಮೂಲದ ಪಬ್ ಜಿ ವಿಡಿಯೋ ಗೇಮ್ ಏಪ್ ಭಾರತದಲ್ಲಿ ನಿಷೇಧ ಆಗಿದ್ದು ಜಾಗತಿಕ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಪಬ್ ಜಿ ವಿಡಿಯೋ ಗೇಮ್ ಆವಿಷ್ಕರಿಸಿದ್ದ ಸೌತ್ ಕೊರಿಯಾ, ಆಬಳಿಕ ಅದನ್ನು ಟೆನ್ಸೆಂಟ್ ಕಂಪನಿಗೆ ಮಾರಿತ್ತು. ಈಗ ಅತಿ ಹೆಚ್ಚು ಗ್ರಾಹಕರನ್ನು ಹೊಂದಿದ್ದ ಭಾರತದಲ್ಲಿ ಪಬ್ ಜಿ ನಿಷೇಧ ಆಗಿದ್ದರಿಂದ ಕಂಪನಿಯ ಷೇರು ಮೌಲ್ಯ ಒಂದೇ ದಿನ ಇಳಿಕೆಯಾಗಿದ್ದು, ಇದರಿಂದ ಕಂಪನಿಗೆ ಒಂದೇ ದಿನದಲ್ಲಿ 14 ಬಿಲಿಯನ್ ಡಾಲರ್ ನಷ್ಟ ಆಗಿದ್ದಾಗಿ ಹೇಳಲಾಗುತ್ತಿದೆ.
ಪಬ್ ಜಿ ಏಪ್ ಗಳಿಗೆ ಭಾರತದಲ್ಲಿ ಅತಿ ಹೆಚ್ಚು ಗ್ರಾಹಕರಿದ್ದರು. ಅಂದಾಜು ಪ್ರಕಾರ, 20 ಕೋಟಿಗೂ ಹೆಚ್ಚು ಗ್ರಾಹಕರನ್ನು ಭಾರತ ಒಂದರಲ್ಲೇ ಪಬ್ ಜಿ ಹೊಂದಿತ್ತು ಎನ್ನಲಾಗುತ್ತಿದೆ. ಹೀಗಾಗಿ ಪಬ್ ಜಿ ಬ್ಯಾನ್ ಈಗಲೇ ಅನುಷ್ಠಾನಕ್ಕೆ ಬಂದಿರದಿದ್ದರೂ, ಭಾರತ ಸರಕಾರ ನಿಷೇಧ ವಿಧಿಸಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ. ಇದರಿಂದಾಗಿ ಟೆನ್ಸೆಂಟ್ ಕಂಪನಿಯ ಷೇರುಗಳನ್ನು ಗ್ರಾಹಕರು ಮಾರತೊಡಗಿದ್ದಾರೆ. ಇದರಿಂದಾಗಿ ಕಂಪೆನಿಯ ಷೇರು ಮೌಲ್ಯ ಎರಡು ಶೇ. ಇಳಿಕೆಯಾಗಿದ್ದಲ್ಲದೆ, ಇದರಿಂದ ಕಂಪನಿಗೆ ಭಾರೀ ನಷ್ಟ ಆಗಿದ್ದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಚೀನಾ ಜೊತೆಗಿನ ಗಡಿ ಸಂಘರ್ಷದ ಬಳಿಕ ಭಾರತದಲ್ಲಿ ಮೊದಲಿಗೆ ಟಿಕ್ ಟಾಕ್, ಯುಸಿ ಬ್ರೌಸರ್ ಸೇರಿದಂತೆ 59 ಜನಪ್ರಿಯ ಏಪ್ ಗಳನ್ನು ನಿಷೇಧಿಸಲಾಗಿತ್ತು. ಎರಡನೇ ಲಿಸ್ಟ್ ನಲ್ಲಿ ಮತ್ತೆ 63 ಏಪ್ ನಿಷೇಧ ಆದಾಗಲೂ ಪಬ್ ಜಿ ನಿಷೇಧಿತ ಪಟ್ಟಿಯಲ್ಲಿ ಇಲ್ಲದೇ ಇದ್ದುದು ಕಂಪೆನಿಗೆ ಇನ್ನೇನು ಸಮಸ್ಯೆ ಇರಲ್ಲ ಎಂದುಕೊಂಡಿತ್ತು. ಈಗ ಮೂರನೇ ಪಟ್ಟಿಯಲ್ಲಿ 118 ಏಪ್ ಲಿಸ್ಟ್ ಮಾಡಿದ್ದು, ಅದರಲ್ಲಿ ಪಬ್ ಜಿಯನ್ನು ಸೇರಿಸಿದ್ದು ಚೀನಾಕ್ಕೆ ದುಬಾರಿಯಾಗಿ ಪರಿಣಮಿಸಿದೆ. ಚೀನಾ ವಿರುದ್ಧ ಭಾರತ ನಡೆಸುತ್ತಿರುವ ಡಿಜಿಟಲ್ ಸ್ಟ್ರೈಕ್ ನಿಂದಾಗಿ ಅಲ್ಲಿನ ಬಹುತೇಕ ಇಲೆಕ್ಟ್ರಾನಿಕ್ ಮತ್ತು ಸಾಫ್ಟ್ ವೇರ್ ಕಂಪನಿಗಳು ತತ್ತರಿಸಿ ಹೋಗಿವೆ. ಇದರಿಂದಾಗಿ ಅಲ್ಲಿನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ವಿರುದ್ಧ ಕಂಪನಿಗಳು ಬಹಿರಂಗವಾಗೇ ಕಿಡಿಕಾರ ತೊಡಗಿವೆ
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm