ಬ್ರೇಕಿಂಗ್ ನ್ಯೂಸ್
04-09-20 05:00 pm Dhruthi Anchan - Correspondant ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 04: ಕೇಂದ್ರ ಸರ್ಕಾರ ನಿನ್ನೆಯಷ್ಟೇ ಪಬ್ಜಿ ಸೇರಿ ಚೀನಾದ 118 ಆಯಪ್ಗಳನ್ನು ನಿಷೇಧಿಸಿದೆ. ದೇಶದ ಸಾರ್ವಭೌಮತ್ವ, ಸುರಕ್ಷತೆ, ಸಮಗ್ರತೆ ದೃಷ್ಟಿಯಿಂದ ಬ್ಯಾನ್ ಮಾಡಿದ್ದಾಗಿ ಹೇಳಿದ್ದು, ಇದರ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಆನ್ಲೈನ್ ರಮ್ಮಿ, ಪೋಕರ್ ಆಟಗಳನ್ನೂ ನಿಷೇಧಿಸಲು ನಿರ್ಧಾರ ಮಾಡಿದೆ. ಯುವಜನತೆಯ ಹಿತದೃಷ್ಟಿಯಿಂದ ಆನ್ಲೈನ್ ರಮ್ಮಿ, ಪೋಕರ್ ಆಟಗಳನ್ನೂ ಬ್ಯಾನ್ ಮಾಡುತ್ತಿರುವುದಾಗಿ ಹೇಳಿದೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಆನ್ ಲೈನ್ ಜೂಜಾಟವು ಯುವಕರ ದಾರಿ ತಪ್ಪಿಸುತ್ತಿದೆ. ಹೀಗಾಗಿ ಎಲ್ಲಾ ತೆರನಾದ ಆನ್ ಲೈನ್ ಜೂಜಾಟವನ್ನು ಆಂಧ್ರದಲ್ಲಿ ನಿಷೇಧಿಸಲಾಗುವುದು ಎಂದು ಸಚಿವ ವೆಂಕಟರಾಮಯ್ಯ ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯದ ಪ್ರಕಾರ, ಮೊದಲ ಬಾರಿಯ ಅಪರಾಧಕ್ಕಾಗಿ ಆನ್ಲೈನ್ ಗ್ಯಾಂಬ್ಲಿಂಗ್ ಸಂಘಟಕರನ್ನು ದಂಡ ಹಾಗೂ ಒಂದು ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು. ಎರಡನೆಯ ಬಾರಿ ತಪ್ಪು ಮರುಕಳಿಸಿದರೆ ದಂಡ ಹಾಗೂ ಎರಡು ವರ್ಷ ಸೆರೆವಾಸದ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.
ಇದಲ್ಲದೆ ಆನ್ಲೈನ್ನಲ್ಲಿನ ಜೂಜಿನ ಆಟಗಳನ್ನು ಆಡುವ ಸಂದರ್ಭದಲ್ಲಿ ಸಿಕ್ಕಿಬಿದ್ದರೆ ಅಂತಹವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಹ ಸಚಿವ ನಾನಿ ತಿಳಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm