ಬ್ರೇಕಿಂಗ್ ನ್ಯೂಸ್
04-09-20 05:00 pm Dhruthi Anchan - Correspondant ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 04: ಕೇಂದ್ರ ಸರ್ಕಾರ ನಿನ್ನೆಯಷ್ಟೇ ಪಬ್ಜಿ ಸೇರಿ ಚೀನಾದ 118 ಆಯಪ್ಗಳನ್ನು ನಿಷೇಧಿಸಿದೆ. ದೇಶದ ಸಾರ್ವಭೌಮತ್ವ, ಸುರಕ್ಷತೆ, ಸಮಗ್ರತೆ ದೃಷ್ಟಿಯಿಂದ ಬ್ಯಾನ್ ಮಾಡಿದ್ದಾಗಿ ಹೇಳಿದ್ದು, ಇದರ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಆನ್ಲೈನ್ ರಮ್ಮಿ, ಪೋಕರ್ ಆಟಗಳನ್ನೂ ನಿಷೇಧಿಸಲು ನಿರ್ಧಾರ ಮಾಡಿದೆ. ಯುವಜನತೆಯ ಹಿತದೃಷ್ಟಿಯಿಂದ ಆನ್ಲೈನ್ ರಮ್ಮಿ, ಪೋಕರ್ ಆಟಗಳನ್ನೂ ಬ್ಯಾನ್ ಮಾಡುತ್ತಿರುವುದಾಗಿ ಹೇಳಿದೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಆನ್ ಲೈನ್ ಜೂಜಾಟವು ಯುವಕರ ದಾರಿ ತಪ್ಪಿಸುತ್ತಿದೆ. ಹೀಗಾಗಿ ಎಲ್ಲಾ ತೆರನಾದ ಆನ್ ಲೈನ್ ಜೂಜಾಟವನ್ನು ಆಂಧ್ರದಲ್ಲಿ ನಿಷೇಧಿಸಲಾಗುವುದು ಎಂದು ಸಚಿವ ವೆಂಕಟರಾಮಯ್ಯ ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯದ ಪ್ರಕಾರ, ಮೊದಲ ಬಾರಿಯ ಅಪರಾಧಕ್ಕಾಗಿ ಆನ್ಲೈನ್ ಗ್ಯಾಂಬ್ಲಿಂಗ್ ಸಂಘಟಕರನ್ನು ದಂಡ ಹಾಗೂ ಒಂದು ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು. ಎರಡನೆಯ ಬಾರಿ ತಪ್ಪು ಮರುಕಳಿಸಿದರೆ ದಂಡ ಹಾಗೂ ಎರಡು ವರ್ಷ ಸೆರೆವಾಸದ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.
ಇದಲ್ಲದೆ ಆನ್ಲೈನ್ನಲ್ಲಿನ ಜೂಜಿನ ಆಟಗಳನ್ನು ಆಡುವ ಸಂದರ್ಭದಲ್ಲಿ ಸಿಕ್ಕಿಬಿದ್ದರೆ ಅಂತಹವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಹ ಸಚಿವ ನಾನಿ ತಿಳಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm