ಬ್ರೇಕಿಂಗ್ ನ್ಯೂಸ್
06-08-21 02:32 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ಕ್ರೀಡಾ ಕ್ಷೇತ್ರದಲ್ಲಿ ಸಾಧಕರಿಗೆ ನೀಡಲಾಗುವ ದೇಶದ ಅತ್ಯುನ್ನತ ಪುರಸ್ಕಾರ ಎಂದು ಪರಿಗಣಿಸಲ್ಪಟ್ಟಿರುವ ರಾಜೀವ ಗಾಂಧಿ ಖೇಲ್ ರತ್ನ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮರು ನಾಮಕರಣ ಮಾಡಿದ್ದಾರೆ. ದೇಶದ ಹಾಕಿ ಕ್ಷೇತ್ರದಲ್ಲಿ ದಂತಕತೆ ಎಂದೇ ಹೆಸರು ಮಾಡಿರುವ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ಖೇಲ್ ರತ್ನ ಪುರಸ್ಕಾರ ನೀಡುವುದಾಗಿ ಪ್ರಕಟಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾತ ಜನರು ಈ ಬಗ್ಗೆ ನನಗೆ ಮನವಿ, ಸಲಹೆಗಳನ್ನು ನೀಡಿದ್ದರು. ಖೇಲ್ ರತ್ನ ಪುರಸ್ಕಾರದ ಹೆಸರನ್ನು ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ಮಾಡುವಂತೆ ಸಲಹೆ ಮಾಡಿದ್ದರು. ದೇಶದ ಜನರ ಭಾವನೆ ಮತ್ತು ದೃಷ್ಟಿಕೋನಕ್ಕೆ ಅಭಿನಂದಿಸುತ್ತೇನೆ. ಜನರ ಭಾವನೆಗೆ ಸ್ಪಂದಿಸಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಅವಾರ್ಡ್ ಎಂದು ಬದಲಿಸಲಾಗಿದೆ. ಜೈಹಿಂದ್ ಎಂದು ಹೇಳಿದ್ದಾರೆ.
1991-92ರಲ್ಲಿ ಖೇಲ್ ರತ್ನ ಅವಾರ್ಡ್ ಅನ್ನು ಮೊದಲ ಬಾರಿಗೆ ಪರಿಚಯಿಸಲಾಗಿತ್ತು. ಅದನ್ನು ಮಾಜಿ ಪ್ರಧಾನಿ ರಾಜೀವ ಗಾಂಧಿ ಹೆಸರಲ್ಲಿ ಮೊದಲಿಗೆ ಚೆಸ್ ಚಾಂಪ್ಯನ್ ವಿಶ್ವನಾಥನ್ ಆನಂದ್ ಅವರಿಗೆ ನೀಡಲಾಗಿತ್ತು. ಆನಂತರ ಲಿಯಾಂಡರ್ ಪೇಸ್, ಸಚಿನ್ ತೆಂಡುಲ್ಕರ್, ಧನರಾಜ್ ಪಿಳ್ಳೆ, ಪುಲ್ಲೇಲ ಗೋಪಿಚಂದ್, ಅಭಿನವ್ ಬಿಂದ್ರಾ, ಅಂಜು ಬಾಬಿ ಜಾರ್ಜ್, ಮೇರಿ ಕೋಮ್ ಮತ್ತು 2020ರಲ್ಲಿ ರಾಣಿ ರಾಮ್ ಪಾಲ್ ಅವರಿಗೆ ಖೇಲ್ ರತ್ನ ಪುರಸ್ಕಾರ ಈವರೆಗೆ ನೀಡಲಾಗಿದೆ.
ಖೇಲ್ ರತ್ನ ಪುರಸ್ಕಾರ ಇನ್ನು ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡಲಿದ್ದು, ಪ್ರಶಸ್ತಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಒಲಿಂಪಿಕ್ ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಸಾಧನೆ ಮಾಡಿದ್ದ ಮೇಜರ್ ಧ್ಯಾನ್ ಚಂದ್ ಹಾಕಿ ಕ್ಷೇತ್ರದಲ್ಲಿ ದಂತಕತೆ ಎಣಿಸಿರುವ ಹೆಸರು. ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮೊದಲೇ 1926 ರಿಂದ 1949ರ ವರೆಗೆ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ದ ಧ್ಯಾನ್ ಚಂದ್, 400 ಗೋಲ್ ಗಳಿಸುವ ಮೂಲಕ ಯಾರೂ ಮಾಡದ ಸಾಧನೆಯನ್ನು ಮಾಡಿದ್ದರು. ಅಲ್ಲದೆ, 1928, 1932 ಮತ್ತು 1936ರಲ್ಲಿ ಭಾರತದ ಹಾಕಿ ತಂಡ ಒಲಿಂಪಿಕ್ ನಲ್ಲಿ ಚಿನ್ನದ ಸಾಧನೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
I have been getting many requests from citizens across India to name the Khel Ratna Award after Major Dhyan Chand. I thank them for their views.
— Narendra Modi (@narendramodi) August 6, 2021
Respecting their sentiment, the Khel Ratna Award will hereby be called the Major Dhyan Chand Khel Ratna Award!
Jai Hind! pic.twitter.com/zbStlMNHdq
India's highest sporting honour Khel Ratna Award, which was named after former prime minister Rajiv Gandhi, was on Friday rechristened in the honour of hockey wizard Dhyan Chand following the admirable performance of both men's and women's hockey teams in the Tokyo Olympics.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 12:54 pm
HK News Desk
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm