ಬ್ರೇಕಿಂಗ್ ನ್ಯೂಸ್
10-08-21 12:17 pm Headline Karnataka News Network ದೇಶ - ವಿದೇಶ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಅಶ್ವಿನಿ ಉಪಾಧ್ಯಾಯ, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತ್, ಪ್ರೀತ್ ಸಿಂಗ್ ಹಾಗೂ ದೀಪಕ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ. ವಿಚಾರಣೆ ಬಳಿಕ ಆರು ಮಂದಿಯನ್ನೂ ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ವಸಾಹತು ಕಾಲದ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಪ್ರಚೋದನಾಕಾರಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಲಾಗಿದೆ. ಇದರಂತೆ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 153-ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವುದು) ಅಡಿ ಎಫ್ಐಆರ್ಗಳನ್ನು ದಾಖಲಿಸಲಾಗಿತ್ತು.
ಅಲ್ಲದೆ, ಅವರು ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ಸೆಕ್ಷನ್ 188 (ಸಾರ್ವಜನಿಕ ಸೇವಕರು ಜಾರಿಗೊಳಿಸಿದ ಆದೇಶಗಳನ್ನು ಪಾಲಿಸದೆ ಇರುವುದು) ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವ ಡಿಡಿಎಂಎ ಕಾಯ್ದೆಯ ಸೆಕ್ಷನ್ 51ರ ಅಡಿ ಕೂಡ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅನುಮತಿ ಪಡೆಯದೆಯೇ ರ್ಯಾಲಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಾವುದೇ ಪೊಲೀಸರು ಸ್ಥಳದಲ್ಲಿ ಹಾಜರಿರಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಜನರು ಗುಂಪುಗೂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ashwani upadhyay and others involved in yesterdays incident to be arrested delhi police
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm