ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm