ಬ್ರೇಕಿಂಗ್ ನ್ಯೂಸ್
16-08-21 12:40 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 16: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದಲ್ಲಿ ಆಡಳಿತವನ್ನು ತಮ್ಮ ತೆಕ್ಕೆಗೆ ಪಡೆದುಕೊಂಡಿದ್ದು ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗುತ್ತಿದೆ. ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ, ಭಾನುವಾರ ರಾಜಧಾನಿ ಕಾಬೂಲನ್ನು ನಾಲ್ಕು ಸುತ್ತಲಿಂದಲೂ ತಾಲಿಬಾನ್ ಉಗ್ರರು ಆಕ್ರಮಿಸುತ್ತಿದ್ದಂತೆ ಅಧಿಕಾರ ತ್ಯಜಿಸಿ ಪರಾರಿಯಾಗಿದ್ದರು.
ಇದೇ ವೇಳೆ ಶಸ್ತ್ರಸಜ್ಜಿತ ತಾಲಿಬಾನ್ ಬಂಡುಕೋರರು ರಾಜಧಾನಿ ಕಾಬೂಲ್ ಪೂರ್ತಿಯಾಗಿ ಆಕ್ರಮಿಸಿಕೊಂಡಿದ್ದಾರೆ. ಆದರೆ ತಾಲಿಬಾನಿ ವಕ್ತಾರರು, ಬಂಡುಕೋರರು ಕಾಬೂಲ್ ನಗರವನ್ನು ಶಾಂತಿಯುತವಾಗಿ ಪ್ರವೇಶ ಮಾಡಿದ್ದಾರೆ. ನಾಗರಿಕರ ಮೇಲಾಗಲೀ, ಸೈನಿಕರ ಮೇಲಾಗಲೀ ದಾಳಿ ನಡೆಸಿಲ್ಲ ಎಂದು ತಿಳಿಸಿದ್ದಾರೆ.



ಅಫ್ಘಾನಿಸ್ತಾನದ ಗೃಹಸಚಿವ ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಗೆ ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಮಾಡುವುದಾಗಿ ತಿಳಿಸಿದ್ದಾರೆ. ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನ ರಾಜಧಾನಿ ಕಾಬೂಲಿಗೆ ನುಗ್ಗಿ ದಾಳಿ ನಡೆಸುವರೆಂಬ ಭೀತಿ ಎದುರಾಗಿತ್ತು. ಆ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಅದನ್ನು ಮನಗಂಡು ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಕಾಬೂಲ್ ಪ್ರವೇಶಿಸಿದಲ್ಲಿ ಆಫ್ಘನ್ ಭದ್ರತಾ ಪಡೆಗಳು ಕಾದಾಟ ನಡೆಸುವುದಿಲ್ಲ ಎನ್ನುವ ಸುಳಿವನ್ನು ನೀಡಿದ್ದರು.
ಇದೇ ವೇಳೆ, ದೇಶದ ಚುಕ್ಕಾಣಿ ಹಿಡಿಯಲು ತಾಲಿಬಾನ್ ಸಂಧಾನಕಾರರು ಮತ್ತು ಅಲ್ಲಿನ ಸರಕಾರದ ನಾಯಕರು ಅಧ್ಯಕ್ಷರ ನಿವಾಸದಲ್ಲಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಮೆರಿಕ ತನ್ನ ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಾಬೂಲಿನಿಂದ ಹಿಂದಕ್ಕೆ ಕರೆಸಿಕೊಂಡಿದೆ. ಆದರೆ, ರಷ್ಯಾ ಮತ್ತು ಚೀನಾ ಕಾಬೂಲಿನಲ್ಲಿನ ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ತಿಳಿಸಿದೆ.
With Taliban seizing control of Kabul and all top provincial capitals of Afghanistan, its top leader Mullah Abdul Ghani Baradar is most likely to become the next President of the war-ravaged nation.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm