ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.





ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am