ಬ್ರೇಕಿಂಗ್ ನ್ಯೂಸ್
06-09-20 02:38 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.6 :ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಭಾರತದಲ್ಲಿ ಶನಿವಾರ ಒಂದೇ ದಿನ 90 ಸಾವಿರಕ್ಕೂ ಅಧಿಕ ಕೊರೋನ ಪ್ರಕರಣಗಳು ವರದಿಯಾಗಿದ್ದು, ವಿಶ್ವದಲ್ಲಿ ಗರಿಷ್ಠ ಸೋಂಕು ದಾಖಲಾದ ದೇಶಗಳ ಪೈಕಿ ಭಾರತ ಬ್ರೆಝಿಲ್ ದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಇದೀಗ ಅಮೆರಿಕದಲ್ಲಿ ಮಾತ್ರ ಭಾರತಕ್ಕಿಂತ ಹೆಚ್ಚು ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ.
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 46ರಷ್ಟು ಹಾಗೂ ಒಟ್ಟು ಸಾವಿನ ಪೈಕಿ ಶೇಕಡ 52ರಷ್ಟು ಪಾಲು ಹೊಂದಿರುವ ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ, ಸಾಂಕ್ರಾಮಿಕ ಹರಡುವಿಕೆ ತಡೆಯಲು ಮತ್ತು ಸಾವಿನ ದರವನ್ನು ಶೇಕಡ 1ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 70 ಸಾವಿರ ದಾಟಿದ್ದು, ಕಳೆದ 10 ದಿನಗಳಲ್ಲಿ 10 ಸಾವಿರ ಸಾವು ಸಂಭವಿಸಿದೆ. ಶನಿವಾರ ರಾತ್ರಿ ವೇಳೆಗೆ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ದಾಟಿದ್ದು, ಬ್ರೆಝಿಲ್ 40,93,586 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವರ್ಲ್ಡೋಮೀಟರ್ಸ್.ಇನ್ಫೋ ಅಂಕಿ ಅಂಶ ಹೇಳಿದೆ.

ಬಿಹಾರದಲ್ಲಿ ಒಂಭತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 750ಕ್ಕೇರಿದೆ. ರಾಜ್ಯದಲ್ಲಿ 1,727 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,45,860ಕ್ಕೇರಿದೆ. ಅಸ್ಸಾಂನಲ್ಲಿ 2,698 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,23,922ಕ್ಕೇರಿದೆ. ರಾಜ್ಯದಲ್ಲಿ ಒಟ್ಟು 352 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಹಿಮಾಂತ ಬಿಸ್ವ ಶರ್ಮಾ ಪ್ರಕಟಿಸಿದ್ದಾರೆ. ಈ ಮಧ್ಯೆ ವಿಶ್ವಾದ್ಯಂತ 26.75 ದಶಲಕ್ಷ ಮಂದಿಗೆ ಸೋಂಕು ತಗಲಿದ್ದು, 8,75,419 ಮಂದಿ ಮೃತಪಟ್ಟಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm