ಬ್ರೇಕಿಂಗ್ ನ್ಯೂಸ್
20-08-21 12:47 pm Headline Karnataka News Network ದೇಶ - ವಿದೇಶ
ಅಂತರ್ ಸರ್ಕಾರಿ ಸಮಿತಿಯನ್ನು ಆಧರಿಸಿದ ಇತ್ತೀಚಿನ ವಿಶ್ವಸಂಸ್ಥೆ ಹವಾಮಾನ ವರದಿ ಅಪಾಯಕಾರಿ ಮಾಹಿತಿ ನೀಡಿದ್ದು ಹವಾಮಾನ ಬದಲಾವಣೆಯ ಕುರಿತು ಎಚ್ಚರಿಕೆ ನೀಡಿದೆ. ಈ ವರದಿಯ ಪ್ರಕಾರ 2030ರ ಸುಮಾರಿಗೆ ಪ್ರಪಂಚವು 1.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳಕ್ಕೆ ಒಳಗಾಗಲಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ವಿಶ್ವಸಂಸ್ಥೆ ತಿಳಿಸಿರುವ ಪ್ರಕಾರ ಹವಾಮಾನ ಬದಲಾವಣೆ ನೈಸರ್ಗಿಕ ವಿಕೋಪವಾಗಿದ್ದು ಅಧಿಕ ಮಳೆ, ಚಂಡಮಾರುತ, ಸುನಾಮಿಯಂತೆಯೇ ಹವಾಮಾನ ವೈಪರೀತ್ಯ ಕೂಡ ಪ್ರಾಕೃತಿಕ ವಿಕೋಪವಾಗಿದೆ ಎಂಬುದಾಗಿ ತಿಳಿಸಿದೆ.
ಇದರ ನಡುವೆಯೇ ಆಫ್ರಿಕಾ ಜನರು ನೈಸರ್ಗಿಕ ವಿಕೋಪ ತಡೆಯುವ ನಿಟ್ಟಿನಲ್ಲಿ ಕೈಜೋಡಿಸಿದ್ದು ಹಳ್ಳಿಗರ ಈ ಬುದ್ಧಿವಂತಿಕೆಗೆ ಸಂಪೂರ್ಣ ವಿಶ್ವವೇ ತಲೆದೂಗಿದೆ. ತೋಟಗಾರಿಕೆಯಲ್ಲಿ ಇವರು ವಿನೂತನ ಮಾದರಿ ಅನುಸರಿಸಿದ್ದು ವೃತ್ತಾಕಾರವಾಗಿ ಸಸಿಗಳನ್ನು ನೆಟ್ಟು ತೋಟಗಾರಿಕೆ ಮಾಡುತ್ತಿದ್ದಾರೆ. ಬೆಳೆಗಳ ಒಂದು ವರ್ತುಲದಂತೆ ಈ ತೋಟಗಳು ಕಾಣುತ್ತಿದ್ದು ಇದರಿಂದ ಹವಾಮಾನ ವೈಪರೀತ್ಯ ತಡೆಗಟ್ಟಬಹುದು ಎಂಬುದು ತಿಳಿದು ಬಂದಿದೆ.



ಈ ತೋಟಗಾರಿಕೆಯ ಹಿಂದಿರುವ ವ್ಯಕ್ತಿ ಸೆನೆಗಲ್ನ ಮೌಸ್ಸಾ ಕಮಾರಾ. ರಾಯಿಟರ್ಸ್ ಸುದ್ದಿ ಸಂಸ್ಥೆ ಇವರ ತೋಟಗಾರಿಕೆಯ ಕುರಿತು ವರದಿ ಮಾಡಿದ್ದು, ಸೆನೆಗಲ್ನ ವೊಲೊಫ್ ಭಾಷೆಯಲ್ಲಿ ಇಂತಹ ತೋಟಗಾರಿಕೆಗೆ ‘ಟೊಲೌ ಕೂರ್’ ಎಂದು ಹೆಸರಿಸಲಾಗಿದೆ. ಈ ರೀತಿಯ ತೋಟಗಾರಿಕೆಯು ಆಹಾರ ಭದ್ರತೆಯನ್ನು ವರ್ಧಿಸುತ್ತದೆ ಎಂದು ತಿಳಿಸಿದ್ದು ಪ್ರಾದೇಶಿಕ ಬರಗಾಲ, ಅರಣ್ಯನಾಶ ಹಾಗೂ ಫಲವತ್ತಾದ ಭೂಮಿಯು ಮರುಭೂಮಿಯಾಗುವುದನ್ನು ತಡೆಯುತ್ತದೆ. ಈ ರೀತಿಯಾಗಿ ಸಾವಿರಾರು ಸಮುದಾಯದವರಿಗೆ ಉದ್ಯೋಗ ದೊರೆಯುತ್ತದೆ ಎಂಬುದು ಕಮಾರಾ ಅಭಿಪ್ರಾಯವಾಗಿದೆ.
ಈ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು ಇದರಿಂದ ದೊರೆಯುವ ಪ್ರಯೋಜನವನ್ನು ಮಾತುಗಳಲ್ಲಿ ವರ್ಣಿಸಲಾಗುವುದಿಲ್ಲ ಎಂದು ಅಭಿಪ್ರಾಯ ನೀಡಿದ್ದಾರೆ. ಬೇಕರಿಯಲ್ಲಿ ಕೆಲಸ ಮಾಡುವುದರ ಜತೆಗೆ ತೋಟದಲ್ಲಿ ತಿನ್ನಲು ಯೋಗ್ಯವಾಗಿರುವ ಹಾಗೂ ಔಷಧೀಯ ಸಸ್ಯಗಳನ್ನು ಬೆಳೆಸುತ್ತಿದ್ದಾರೆ.

2007ರಲ್ಲಿ ಆರಂಭವಾದ ಗ್ರೀನ್ ವಾಲ್ ಯೋಜನೆಯ ಭಾಗವಾಗಿ ಕಮಾರಾ ಕಾರ್ಯನಿರ್ವಹಿಸುತ್ತಿದ್ದಾರೆ. ಹವಾಮಾನ ವೈಪರೀತ್ಯ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪಗಳಿಂದಾಗಿ ಫಲವತ್ತಾಗಿರುವ ಭೂಮಿ ಮರುಭೂಮಿಯಾಗಿ ಮಾರ್ಪಡುತ್ತಿದೆ. ಗ್ರೀನ್ ವಾಲ್ ಯೋಜನೆಯು ಇಂತಹ ಸವಾಲುಗಳನ್ನು ಎದುರಿಸುವ ಆಶಾಕಿರಣವಾಗಿ ರೂಪುಗೊಂಡಿದೆ. ಆಫ್ರಿಕಾ ಸಂಘಟನೆಯು 2007ರಲ್ಲಿ ಆರಂಭಿಸಿದ ಈ ಯೋಜನೆ ಪ್ರಸ್ತುತ ವಿಶ್ವದ ಅತ್ಯಂತ ಬಡ ದೇಶಗಳಲ್ಲೊಂದಾದ ಸಹೇಲ್ನಲ್ಲಿ ಹದಗೆಟ್ಟ ಕೃಷಿ ಭೂಮಿ ಫಲವತ್ತಾಗಿಸಲು ಜೊತೆಗೆ ಲಕ್ಷಾಂತರ ಜೀವಗಳನ್ನು ಬರದಿಂದ ಬಡತನದಿಂದ ಸಂರಕ್ಷಿಸುವ ಗುರಿ ಹೊಂದಿದೆ.



ಗ್ರೀನ್ ವಾಲ್ ಯೋಜನೆಯು ಒಮ್ಮೆ ಪೂರ್ಣಗೊಂಡ ನಂತರ ಅತಿದೊಡ್ಡ ಜೀವವಿಕಾಸ ಗೋಡೆ ಎಂಬುದಾಗಿ ಖ್ಯಾತಿಗಳಿಸಲಿದೆ. ವಿಶ್ವದ 8,000 ಕಿಮೀ ಉದ್ದದ ನೈಸರ್ಗಿಕ ಅದ್ಭುತವು ಆಫ್ರಿಕಾ ಖಂಡವನ್ನು ಸಂಪೂರ್ಣವಾಗಿ ವ್ಯಾಪಿಸಲಿದೆ. ಕೋವಿಡ್ ಸಾಂಕ್ರಾಮಿಕದ ನಂತರ ಈ ಯೋಜನೆ ಲಕ್ಷಾಂತರ ಜನರಿಗೆ ಉದ್ಯೋಗವನ್ನು ನೀಡಿದೆ. ಸೆನೆಗಲ್ ಸಾಂಕ್ರಾಮಿಕದ ಭೀತಿಯಿಂದಾಗಿ ತನ್ನ ಗಡಿಗಳನ್ನು ಮುಚ್ಚಿತು ಹಾಗೂ ಆಮದುಗಳನ್ನು ಕಡಿತಗೊಳಿಸಿತು ಜೊತೆಗೆ ವಿದೇಶಿ ಆಹಾರ ಮತ್ತು ಔಷಧಿಯ ಮೇಲೆ ಗ್ರಾಮೀಣ ಸಮುದಾಯಗಳ ಅವಲಂಬನೆಯನ್ನು ಬಹಿರಂಗಪಡಿಸಿತು. ಇದರಿಂದಾಗಿ ಮರು ಅರಣ್ಯೀಕರಣ ಸಂಸ್ಥೆಗಳು ಹಳ್ಳಿಗರು ಸ್ವಾವಲಂಬಿಯಾಗಲು ಸಹಕಾರ ನೀಡುವ ವಿಧಾನಗಳನ್ನು ಹುಡುಕಲು ಪ್ರೇರೇಪಿಸಿತು.
ಹವಾಮಾನ ವೈಪರೀತ್ಯಗಳಿಂದ ಬಂಜರು ಭೂಮಿಯ ಸಂಕಷ್ಟವನ್ನು ಎದುರಿಸುತ್ತಿರುವ ಸಹೇಲ್ ಪ್ರದೇಶವು ಈಗಾಗಲೇ ಬರಗಾಲ, ಆಹಾರದ ಕೊರತೆ, ನೈಸರ್ಗಿಕ ಸಂಪನ್ಮೂಲಗಳ ಇಳಿಕೆ ಮೊದಲಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಗ್ರೀನ್ ವಾಲ್ ಯೋಜನೆಯು ಗ್ರಾಮೀಣ ಜನರಿಗೆ ಸ್ವಾವಲಂಬಿಯಾಗುವ ದಾರಿಯನ್ನು ತೋರಿಸಿದ್ದು ನೈಸರ್ಗಿಕ ಸಂರಕ್ಷಣೆಗೂ ರಹದಾರಿಯಾಗಿದೆ ಎಂಬುದಾಗಿ ವೆಬ್ಸೈಟ್ ಹೇಳಿಕೆ ನೀಡಿದೆ.
Great Green Wall Farmers in Senegal Growing Circular Gardens to fight Climate change.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am