ಬ್ರೇಕಿಂಗ್ ನ್ಯೂಸ್
24-08-21 01:30 pm Headline Karnataka News Network ದೇಶ - ವಿದೇಶ
ರಾಯಪುರ, ಆಗಸ್ಟ್ 23: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಕನ್ಹೈಗುಡ ಗ್ರಾಮದ ಗೊಂಪಾಡ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಮಾಹಿತಿ ಆಧರಿಸಿ ಡಿಆರ್ಜಿ, ಸಿಆರ್ಪಿಎಫ್ ಮತ್ತು ಕೋಬ್ರಾ ಪಡೆಗಳು ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ’ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶರ್ಮಾ ಅವರು ತಿಳಿಸಿದರು.


ಗುಂಡಿನ ಕಾಳಗದ ಬಳಿಕ ಘಟನಾ ಸ್ಥಳದಲ್ಲಿ ಇಬ್ಬರು ನಕ್ಸಲರ ಶವ ಪತ್ತೆಯಾಗಿದೆ. ಅಲ್ಲಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಎನ್ಕೌಂಟರ್ನಲ್ಲಿ ಹಲವು ನಕ್ಸಲರು ಗಾಯಗೊಂಡಿರಬಹುದು ಅಥವಾ ಸಾವಿಗೀಡಾಗಿರಬಹುದು. ಆದರೆ ನಕ್ಸಲರು ಅವರನ್ನು ಅರಣ್ಯದೊಳಗೆ ಕರೆದೊಯ್ಯುವಲ್ಲಿ ಸಫಲರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.
ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ. ಇದರಲ್ಲಿ ಒಬ್ಬನನ್ನು ಕೊಂಟಾ ಪ್ರದೇಶದಲ್ಲಿ ಸಕ್ರಿಯವಾಗಿರುವ ನಕ್ಸಲ್ ಗುಂಪಿನ ಕಮಾಂಡರ್ ಕವಾಸಿ ಹುಂಗಾ ಆಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ಈ ಪ್ರದೇಶದಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.
Two Naxal dead bodies have been recovered with arms, ammunition, and explosive materials along with other camping materials. Searching is on for other Naxals who have fled the spot. There might be a few more Naxals who have got injured during the exchange of fire.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm