ಬ್ರೇಕಿಂಗ್ ನ್ಯೂಸ್
06-09-20 07:46 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 6: ಅತ್ತ ಕಾಶ್ಮೀರ ಗಡಿಭಾಗ ಲಡಾಖ್ ನಲ್ಲಿ ಚೀನಾ ಪಡೆ ಕಾಲು ಕೆರೆದು ಯುದ್ಧಕ್ಕೆ ಬರುತ್ತಿದ್ದರೆ ಇತ್ತ ಸಿಕ್ಕಿಂ ಗಡಿಭಾಗದಲ್ಲಿ ಪರ್ವತ ಶಿಖರಗಳ ನಡುವೆ ಸಿಕ್ಕಿಬಿದ್ದಿದ್ದ ಚೀನಾ ಪ್ರಜೆಗಳನ್ನು ಭಾರತದ ಯೋಧರು ರಕ್ಷಿಸಿದ್ದಾರೆ.
ಉತ್ತರ ಸಿಕ್ಕಿಂ ಗಡಿಭಾಗದಲ್ಲಿ 17 ಸಾವಿರ ಅಡಿ ಎತ್ತರದಲ್ಲಿ ಮೈನಸ್ ಡಿಗ್ರಿ ಚಳಿಯಲ್ಲಿ ಮೂವರು ಚೀನಾ ಪ್ರಜೆಗಳು ಸಿಕ್ಕಿಬಿದ್ದಿದ್ದರು. ದಾರಿ ತಪ್ಪಿ ಭಾರತದ ಗಡಿಗೆ ಬಂದಿದ್ದ ಮೂವರಿಗೆ ಭಾರತೀಯ ಯೋಧರು ಆಹಾರ, ಬಟ್ಟೆಗಳನ್ನು ನೀಡಿ ಮಾನವೀಯ ನೆಲೆಯಲ್ಲಿ ಆರೈಕೆ ಮಾಡಿದ್ದಾರೆ. ಶೂನ್ಯಕ್ಕಿಂತ ಕಡಿಮೆ ಉಷ್ಣತೆ ಇರುವಲ್ಲಿ ಮಹಿಳೆ ಸೇರಿದಂತೆ ಮೂವರು ಚೀನಾ ಪ್ರಜೆಗಳು ಪತ್ತೆಯಾಗಿದ್ದರು. ಅವರಿಗೆ ಊಟ ಮತ್ತು ಬಟ್ಟೆ ನೀಡಿ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ. ಭಾರತೀಯ ಯೋಧರ ಸಹಾಯಕ್ಕಾಗಿ ಚೀನಾ ಪ್ರಜೆಗಳು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಟ್ವೀಟ್ ನಲ್ಲಿ ಸೇನೆ ತಿಳಿಸಿದೆ.


ಒಂದೆಡೆ ಚೀನಾ ಸೇನೆ ಆಕ್ರಮಣಕಾರಿ ನೀತಿ ತೋರುತ್ತಿರುವಾಗಲೇ ಭಾರತೀಯ ಸೇನೆ ಔದಾರ್ಯ ಮೆರೆದಿರುವುದು ಜಾಲತಾಣದಲ್ಲಿ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm