ಬ್ರೇಕಿಂಗ್ ನ್ಯೂಸ್
31-08-21 04:13 pm Headline Karnataka News Network ದೇಶ - ವಿದೇಶ
ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್ಪೋರ್ಟ್ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ.
ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಯುತ್ತಿರುವ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಸೌದಿ ಅರೇಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಡ್ರೋನ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯಾವ ಸಂಘಟನೆಯೂ ಬಹಿರಂಗವಾಗಿ ಇದರ ಜವಾಬ್ದಾರಿ ಹೊರದ ಕಾರಣ ಈ ಕುರಿತು ಇನ್ನಷ್ಟೇ ತನಿಖೆಯಾಗಬೇಕಾಗಿದೆ. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯಕ್ಕೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.



ಇದಕ್ಕೂ ಮೊದಲು ನೈಋತ್ಯ ಯೆಮನ್ನಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು. ಈ ದುರಂತದಲ್ಲಿ ಸುಮಾರು 30 ಸೈನಿಕರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆ ಹಾಗೂ ಹೌಥಿಗಳ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಡ್ರೋನ್ ದಾಳಿ ನಡೆಸಲಾಗಿತ್ತು.
2015ರಿಂದ ಯೆಮನ್ನ ಹೌಥಿ ಬಂಡಾಯಗಾರರು ಸೌದಿ ನೇತೃತ್ವದ ಸೇನಾ ಪಡೆಯ ವಿರುದ್ಧ ಸಂಘರ್ಷ ನಡೆಸುತ್ತಿದೆ. ಮುಖ್ಯವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದ್ದು, ಇಂದು ಅಬಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದೆ.
A drone attack on Saudi Arabia's Abha airport wounded eight people on Tuesday, said the Saudi-led coalition battling Huthi rebels in neighbouring Yemen.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm