ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.






ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am