ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.






ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm