ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.
ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.
ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm