ಬ್ರೇಕಿಂಗ್ ನ್ಯೂಸ್
02-09-21 11:00 am Headline Karnataka News Network ದೇಶ - ವಿದೇಶ
ಶ್ರೀನಗರ, ಸೆ.2: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ನಾಯಕನಾಗಿ ಗುರುತಿಸಲ್ಪಟ್ಟಿದ್ದ ಸೈಯದ್ ಅಲಿ ಶಾ ಗಿಲಾನಿ ಬುಧವಾರ ರಾತ್ರಿ ಶ್ರೀನಗರದಲ್ಲಿರುವ ಹೈದರ್ ಪೋರಾ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಕೆಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗಿಲಾನಿ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ಇರಲಿಲ್ಲ. ಅವರು ಇಬ್ಬರು ಗಂಡು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. 1929ರ ಸೆಪ್ಟಂಬರ್ 29ರಂದು ಜನಿಸಿದ್ದ ಅಲಿ ಶಾ ಗಿಲಾನಿ, ಪ್ರತ್ಯೇಕತವಾದಿ ನಾಯಕರಾಗಿಯೇ ಗುರುತಿಸಿಕೊಂಡಿದ್ದರು. ಕಾಶ್ಮೀರವನ್ನು ಪ್ರತ್ಯೇಕವಾಗಿಸುವುದು ಮತ್ತು ಸ್ವತಂತ್ರ ರಾಷ್ಟ್ರವಾಗಿಸಲು ಪ್ರಯತ್ನ ಪಟ್ಟಿದ್ದರು. ಜಮಾತ್ ಇ ಇಸ್ಲಾಮೀ ಕಾಶ್ಮೀರ್ ಎನ್ನುವ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಗಿಲಾನಿ ಬಳಿಕ ತನ್ನದೇ ಆದ ತೆಹ್ರೀಕ್ ಇ ಹುರಿಯತ್ ಎಂಬ ರಾಜಕೀಯ ಪಕ್ಷ ಹುಟ್ಟುಹಾಕಿದ್ದರು.


ಸರ್ವ ಪಕ್ಷಗಳ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷರಾಗಿದ್ದ ಅಲಿ ಶಾ ಗಿಲಾನಿ, ಕಳೆದ ಬಾರಿ ಜಮ್ಮು ಕಾಶ್ಮೀರದ ವಿಶೇಷ ಪ್ರಾತಿನಿಧ್ಯವನ್ನು ತೆಗೆದುಹಾಕಿದ ಬಳಿಕ 2020 ಜೂನ್ ನಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಸೋಪೋರ್ ವಿಧಾನಸಭಾ ಕ್ಷೇತ್ರದಲ್ಲಿ 1972, 1977 ಮತ್ತು 1987ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಿಲಾನಿ ಕಾಶ್ಮೀರದ ವಿಚಾರವನ್ನು ಹಿಂಸೆಗೆ ಆಸ್ಪದ ನೀಡದೇ ಬಗೆಹರಿಸುವಂತೆ ಕರೆ ನೀಡುತ್ತಿದ್ದರು. ಆದರೆ, ಉಗ್ರವಾದಿ ಸಂಘಟನೆಗಳು ಗಿಲಾನಿ ಮಾತಿಗೆ ಸಹಮತ ನೀಡಿರಲಿಲ್ಲ. ಆನಂತರ ಉಗ್ರವಾದಿ ಸಂಘಟನೆಗಳಿಗೆ ಫಂಡಿಂಗ್ ಮತ್ತು ಹಣಕಾಸು ಸಂಗ್ರಹ ಪ್ರಕರಣದಲ್ಲಿ ಗಿಲಾನಿ ಹೆಸರು ಕೇಳಿಬಂದಿತ್ತು.
ashmiri separatist leader Syed Ali Shah Geelani died at his Hyderpora residence in Srinagar at 10.35 pm on Wednesday night. He was 91 years old.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm