ಬ್ರೇಕಿಂಗ್ ನ್ಯೂಸ್
03-09-21 01:11 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆ.3: ಅಮೆರಿಕದ ಪೂರ್ವ ಕರಾವಳಿಗೆ ಅಪ್ಪಳಿಸಿದ ಇಡಾ ಚಂಡಮಾರುತದಿಂದಾಗಿ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಕನಿಷ್ಠ 45 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಜೆರ್ಸಿಯಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆಂದು ಡೆಮಾಕ್ರಟಿಕ್ ಗವರ್ನರ್ ಫಿಲ್ ಮರ್ಫಿ ತಿಳಿಸಿದ್ದಾರೆ. ನ್ಯೂಯಾರ್ಕ್ ನಗರದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಈ ಪೈಕಿ, ಅಪಾರ್ಟ್ಮೆಂಟ್ಗಳ ಗೋಡೌನ್ನಲ್ಲಿ ಸಿಲುಕಿ 11 ಜನರು ಮೃತಪಟ್ಟಿದ್ದಾರೆ.
ಪೆನ್ಸಿಲ್ವೇನಿಯಾದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಭೀಕರ ಗಾಳಿಗೆ ಮರ ಬಿದ್ದು ಓರ್ವ ಮೃತಪಟ್ಟಿದ್ದಾನೆ. ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ವ್ಯಕ್ತಿ ತನ್ನ ಪತ್ನಿಯನ್ನು ಕಾಪಾಡಿ, ಆತ ಕಾರು ಸಮೇತ ನೀರಿನಲ್ಲಿ ಮುಳುಗಿ ಸತ್ತಿದ್ದಾನೆ. ಮೇರಿಲ್ಯಾಂಡ್, ಕನೆಕ್ಟಿಕಟ್ನಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ.





ಅಲ್ಲಿನ ಸ್ಥಳೀಯರು ಮನೆಗಳಿಗೆ ನೀರು ನುಗ್ಗದಂತೆ ತಡೆಯಲು ಯತ್ನಿಸಿದ್ದರೂ, ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಬದುಕುಳಿಯುವುದೇ ದೊಡ್ಡ ಸವಾಲಾಗಿದೆ. ಜನರು ಮನೆಯಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ, ಗಾಳಿಗೆ ರಸ್ತೆಗಳು ಹಾಳಾಗಿದ್ದು, ಮರಗಳು ಉರುಳಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆ ಮಂದಗತಿಯಲ್ಲಿ ಸಾಗಿದೆ.
ನ್ಯೂಯಾರ್ಕ್ ನಗರದಲ್ಲಿ ಗುರುವಾರ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ವಿಪರೀತ ಗಾಳಿ ಮಳೆಯ ಕಾರಣಕ್ಕೆ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಲವಾರು ನಗರಗಳು ಮುಳುಗಡೆಯಾಗಿದ್ದು, ವಾಹನಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ. ಜಲಾವೃತಗೊಂಡಿರುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿದೆ.
New York City flooding Live updates: Dozens have died in six Eastern states Connecticut, Maryland, New Jersey, New York, Pennsylvania and Virginia after Hurricane Ida brought unprecedented rainfall to some areas.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm