ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .
ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm