ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm