ಬ್ರೇಕಿಂಗ್ ನ್ಯೂಸ್
07-09-20 06:06 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮತ್ತು ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲು ಎಂದು ಗುರುತಿಸಬಹುದಾದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್ಸ್ಟ್ರೇಟರ್ ವೆಹಿಕಲ್ (ಎಚ್ಎಸ್ಟಿಡಿವಿ)ಹಾರಾಟ ಪರೀಕ್ಷೆ ಯಶಸ್ವಿಯಾಗಿದೆ.
ಒಡಿಶಾದ ಕರಾವಳಿ ತೀರ ಪ್ರದೇಶದಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ 11ಗಂಟೆ ಸುಮಾರಿನಲ್ಲಿ ಎಚ್ ಎಸ್ ಟಿಡಿವಿ ಯಶಸ್ವಿಯಾಗಿ ಹಾರಾಟ ನಡೆಸಿದೆ. ಈ ವಾಹಕ 6 ಮಾಕ್ ವೇಗದಲ್ಲಿ ಕೇವಲ 20 ಸೆಕೆಂಡ್ ಗಳಲ್ಲಿ 32.5 ಎತ್ತರಕ್ಕೆ ಚಲಿಸಬಲ್ಲ ಸಾಮರ್ಥ್ಯ ಹೊಂದಿದೆ.
ಮೊದಲಿಗೆ ಹೈಪರ್ಸೋನಿಕ್ ವಾಹನವನ್ನು ಮಿಸೈಲ್ ಬೂಸ್ಟರ್ ಮೂಲಕ 30 ಕಿಮೀ ಎತ್ತರಕ್ಕೆ ಉಡಾಯಿಸಲಾಯಿತು. ಅಷ್ಟು ಎತ್ತರ ತಲುಪಿದ ಬಳಿಕ ವಾಹನವು ಬೂಸ್ಟರ್ನಿಂದ ಬೇರ್ಪಟ್ಟಿತು. ಆ ಬಳಿಕ ವಾಹನದ ಒಳಕ್ಕೆ ಗಾಳಿಯನ್ನು ಸೆಳೆಯಲಾಯಿತು. ಆಗ ಸ್ಕ್ರಾಮ್ಜೆಟ್ ಎಂಜಿನ್ ಚಾಲನೆಗೊಂಡು 20 ಸೆಕೆಂಡುಗಳ ಕಾಲ ವಾಹನ ಮಾಚ್6 ವೇಗದಲ್ಲಿ ಸಾಗಿತು. ಬರೋಬ್ಬರಿ 2,500 ಡಿಗ್ರಿ ಸೆಲ್ಷಿಯಸ್ನಷ್ಟು ಶಾಖ ಹಾಗೂ ಗಾಳಿಯ ವೇಗವನ್ನು ಈ ವಾಹನ ತಡೆದುಕೊಂಡು ಯಶಸ್ವಿಯಾಗಿ ಸಾಗಿತು.
ಡಿಆರ್ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ನೇತೃತ್ವದ ಹೈಪರ್ಸಾನಿಕ್ ಮಿಸೈಲ್ ತಂಡ ಇದನ್ನು ದೇಶೀಯವಾಗಿಯೇ ಅಭಿವೃದ್ಧಿಪಡಿಸಿದೆ. ಭವಿಷ್ಯದ ಕ್ಷಿಪಣಿಗಳಿಗೆ ಈ ಪರೀಕ್ಷೆ ಮುನ್ನುಡಿ ಬರೆದಿದೆ. ಮುಂದಿನ 5 ವರ್ಷದಲ್ಲಿ ಸ್ಕ್ರಾಮ್ಜೆಟ್ ಎಂಜಿನ್ ಹೊಂದಿರುವ ಹೈಪರ್ ಸೋನಿ ಮಿಸೈಲ್ಗಳನ್ನ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ. ಹೈಪರ್ಸೋನಿಕ್ ಎಂದರೆ ಶಬ್ದದ ವೇಗಕ್ಕೆ ಹಲವು ಪಟ್ಟು ವೇಗ ಎಂದರ್ಥ. ಡಿಆರ್ಡಿಒ ಮೂಲಗಳ ಪ್ರಕಾರ, ಮಾಚೋ-6 ವೇಗದಲ್ಲಿ, ಅಂದರೆ ಸೆಕೆಂಡ್ಗೆ 2 ಕಿಮೀಯಷ್ಟು ವೇಗದಲ್ಲಿ ಈ ಭವಿಷ್ಯದ ಕ್ಷಿಪಣಿಗಳು ಹೋಗಬಲ್ಲುವು.
ಹೆಚ್ಎಸ್ಟಿಡಿವಿ ವಾಹನದ ಪ್ರಯೋಗ ಯಶಸ್ವಿಯಾಗುತ್ತಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್ಡಿಒಗೆ ಅಭಿನಂದನೆ ಸಲ್ಲಿಸಿದರು. ಇದು ಸ್ವಾವಲಂಬಿ ಭಾರತದ ಆಶಯವನ್ನು ಈಡೇರಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಬಣ್ಣಿಸಿದರು.
ದೇಶೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್ಸ್ಟ್ರೇಟರ್ ವೆಹಿಕಲ್ (ಎಚ್ಎಸ್ಟಿಡಿವಿ) ಯನ್ನು ಯಶಸ್ವಿಯಾಗಿ ಹಾರಾಟ ಪರೀಕ್ಷಿಸಿದ್ದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಯನ್ನು ಅಭಿನಂದಿಸಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am