ಬ್ರೇಕಿಂಗ್ ನ್ಯೂಸ್
06-09-21 02:36 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.6: ಯೋಗಿ ಆದಿತ್ಯನಾಥ್ ಸರಕಾರದ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ನಾಯಕ ಆಕಾಶ್ ಕುಮಾರ್ ಸಕ್ಸೇನಾ ನೀಡಿರುವ ದೂರಿನ ಪ್ರಕಾರ ರಾಮಪುರ ಜಿಲ್ಲೆಯ ಸಿವಿಲ್ ಲೈನ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಜನರ ರಕ್ತ ಹೀರುವ ಸರಕಾರ ಎಂದು ಅಜೀಜ್ ಖುರೇಷಿ ಹೇಳಿಕೆ ನೀಡಿದ್ದಾರೆ ಎಂದು ಸಕ್ಸೇನಾ ದೂರಿನಲ್ಲಿ ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮನೆಗೆ ಭೇಟಿ ನೀಡಿದ ವೇಳೆ ಅಜೀಜ್ ಖುರೇಷಿ ಈ ಹೇಳಿಕೆ ನೀಡಿದ್ದಾರೆಂದು ಸಕ್ಸೇನಾ ತಿಳಿಸಿದ್ದಾರೆ. ಖುರೇಷಿ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ಸಂಘರ್ಷ ಸೃಷ್ಟಿಯಾಗಲಿದೆ. ಅಶಾಂತಿಗೆ ಕಾರಣವಾಗಲಿದೆ ಎಂದು ಸಕ್ಸೇನಾ ತಿಳಿಸಿದ್ದು, ಇದರ ಸಾಕ್ಷ್ಯಕ್ಕಾಗಿ ಪೊಲೀಸರಿಗೆ ಹೇಳಿಕೆಯುಳ್ಳ ದಾಖಲೆಯನ್ನು ನೀಡಿದ್ದಾರೆ.

ಖುರೇಷಿ ಅವರ ವಿರುದ್ಧ 153 ಎ( ಧರ್ಮಗಳ ನಡುವೆ ವಿಷಬೀಜ ಬಿತ್ತುವುದು), 153 ಬಿ (ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವುದು), 124 ಎ (ದೇಶದ್ರೋಹ), 505(1) ಬಿ (ಸಮಾಜದಲ್ಲಿ ಭಯ ಸೃಷ್ಟಿಸುವುದು) ಸೆಕ್ಷನ್ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಅಜೀಜ್ ಖುರೇಷಿ 2014ರಿಂದ 2015ರ ವರೆಗೆ ಮಿಜೋರಾಂ ರಾಜ್ಯಪಾಲರಾಗಿದ್ದರು. ಕೆಲ ಕಾಲ ಉತ್ತರ ಪ್ರದೇಶದ ರಾಜ್ಯಪಾಲರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
Former Uttar Pradesh Governor Aziz Qureshi has been booked for sedition over his alleged derogatory remarks against the Yogi Adityanath government in the state, police said on Monday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm