ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm