ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am