ಬ್ರೇಕಿಂಗ್ ನ್ಯೂಸ್
11-09-21 03:56 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಸೆ. 11: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು, ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ ತಕ್ಕಂತೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಸಂಸ್ಕೃತಿ ಇದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ . ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ.

ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷವೇ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ರೂಪಾನಿ ನಡೆ ಆಶ್ಚರ್ಯ ಮೂಡಿಸಿದೆ. ಬಿ.ಎಲ್.ಸಂತೋಷ್ ಗುಜರಾತ್ನ ರಾಜಭವನದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಜಯ್ ರೂಪಾನಿ ಅವರು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ್ದು, ಈವರೆಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುವೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿರ್ವಹಿಸುವುದಾಗಿ ಹೇಳಿದ್ದಾರೆ.


2016ರ ಆಗಸ್ಟ್ 7 ರಂದು ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಪ್ರಮಾಣವಚನ ಸ್ವೀಕರಿಸಿದ್ದರು. ಐದು ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು, ಇದೀಗ ಅವರು ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
In an unexpected political development, Gujart chief minister Vijay Rupani on Saturday submitted his resignation to governor Acharya Devvrat at Raj Bhavan.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm