ಬ್ರೇಕಿಂಗ್ ನ್ಯೂಸ್
12-09-21 10:18 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.12 : ಗುಜರಾತ್ ನೂತನ ಸಿಎಂ ಸ್ಥಾನಕ್ಕೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಭಾನುವಾರ ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ದಿಢೀರ್ ಆಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಯಾರ ಬರಲಿದ್ದಾರೆ ಎಂಬ ಬಗ್ಗೆ ಭಾರೀ ಕುತೂಹಲ ಎದ್ದಿತ್ತು. ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಮಾಜಿ ಸಚಿವ ಗೋರ್ಧಾನ್ ಝದಾಫಿಯಾ, ಲಕ್ಷದ್ವೀಪ, ದಾದರ್, ನಗರ ಹವೇಲಿಯ ಆಡಳಿತಾಧಿಕಾರಿ ಆಗಿರುವ ಪ್ರಫುಲ್ ಪಟೇಲ್ ಹೆಸರು ಭಾರೀ ರೇಸಿನಲ್ಲಿತ್ತು. ಇದಲ್ಲದೆ, ಗುಜರಾತ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಹೆಸರು ಕೂಡ ಚಾಲ್ತಿಯಲ್ಲಿತ್ತು.

ಆದರೆ, ಸಿಎಂ ಗಾದಿಯ ರೇಸಿನಲ್ಲಿದ್ದ ಎಲ್ಲರ ಹೆಸರನ್ನೂ ಹಿಂದಿಕ್ಕಿ ಭೂಪೇಂದ್ರ ಪಟೇಲ್ ಇಂದು ನಡೆದ ಸಭೆಯಲ್ಲಿ ಶಾಸಕಾಂಗ ಸಭೆಯಲ್ಲಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭೂಪೇಂದ್ರ ಪಟೇಲ್ ಘಾಟ್ಲೋಡಿಯಾ ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಬಾರಿಗೆ 2017ರಲ್ಲಿ ಶಾಸಕರಾಗಿದ್ದರು. ಅದಕ್ಕೂ ಮುನ್ನ ಅಹ್ಮದಾಬಾದ್ ಮಹಾನಗರ ಪಾಲಿಕೆಯಲ್ಲಿ ಸದಸ್ಯರಾಗಿದ್ದಲ್ಲದೆ, ಅಹ್ಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಶಾಸಕಾಂಗ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ಹಾಗೂ ನರೇಂದ್ರ ಸಿಂಗ್ ತೋಮರ್ ಗಾಂಧಿನಗರಕ್ಕೆ ಬಂದಿದ್ದರು.
ಇಂಜಿನಿಯರಿಂಗ್ ಪದವೀಧರನಾಗಿರುವ ಪಟೇಲ್, ಗುಜರಾತಿನಲ್ಲಿ ಪ್ರಬಲವಾಗಿರುವ ಪಾಟೀದಾರ್ ಸಮುದಾಯಕ್ಕೆ ಸೇರಿದವರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಆಪ್ತರು ಎನ್ನಲಾಗುತ್ತಿದ್ದು, ಇದೇ ಕಾರಣದಿಂದ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಚುನಾವಣೆ ಕಾಲದಲ್ಲಿ ಸಿಎಂ ಸ್ಥಾನಕ್ಕೆ ಏರಿದ್ದಾರೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಪಟೇಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
The BJP on Sunday named first-time MLA Bhupendra Patel as the next chief minister of Gujarat, a day after Vijay Rupani stepped down from the post.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am