ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.



ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm