ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm