ಬ್ರೇಕಿಂಗ್ ನ್ಯೂಸ್
17-09-21 10:28 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.17 : ಜಿಎಸ್ಟಿ ಮಂಡಳಿ ಸಭೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲನ್ನು ಜಿಎಸ್ಟಿ ವ್ಯಾಪ್ತಿಗೆ ತರುವಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯಗಳು ಒಮ್ಮತಕ್ಕೆ ಬರಲು ವಿಫಲವಾಗಿವೆ. ಪೆಟ್ರೋಲಿಯಂ ಉತ್ಪನ್ನಗಳಿಂದ ರಾಜ್ಯ ಮತ್ತು ಕೇಂದ್ರಕ್ಕೆ ಭರಪೂರ ತೆರಿಗೆಯ ಲಾಭ ದಕ್ಕುತ್ತಿರುವುದರಿಂದ ಇದನ್ನು ಬಿಟ್ಟುಕೊಡಲು ರಾಜ್ಯಗಳು ಕೂಡ ಒಪ್ಪುತ್ತಿರಲಿಲ್ಲ.
ಕೇಂದ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಯಡಿ ಏಕರೂಪದ ತೆರಿಗೆಗೆ ಒಳಪಡಿಸುವ ಪ್ರಸ್ತಾವಕ್ಕೆ ಮೊದಲಿನಿಂದಲೂ ಕೆಲವು ರಾಜ್ಯಗಳು ವಿರೋಧ ಸೂಚಿಸಿದ್ದವು. ಒಂದೂವರೆ ವರ್ಷಗಳ ನಂತರ ಜಿಎಸ್ಟಿ ಮಂಡಳಿಯ ಸಭೆ ಇಂದು ಲಕ್ನೋದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದಿತ್ತು. ಸಭೆಯಲ್ಲಿ ಕೆಲವು ಔಷಧಿಗಳಿಗೆ ರಿಯಾಯ್ತಿ ನೀಡಿದರೆ, ಕೆಲವು ಉತ್ಪನ್ನಗಳಿಗೆ ಹೆಚ್ಚುವರಿಯಾಗಿ ತೆರಿಗೆ ವಿಧಿಸಲಾಗಿದೆ.

ಆದರೆ, ಪೆಟ್ರೋಲ್, ಡೀಸೆಲ್ ಬಗ್ಗೆ ಅಭಿಪ್ರಾಯ ನೀಡುವುದಕ್ಕೆ ರಾಜ್ಯಗಳು ವಿರೋಧ ಸೂಚಿಸಿವೆ. ಹಾಗಾಗಿ, ಈ ಸಭೆಯಲ್ಲಿ ಇದರ ಬಗ್ಗೆ ಚರ್ಚೆಯೇ ಬೇಡವೆಂದು ಸಚಿವೆ ನಿರ್ಮಲಾ ಸೀತಾರಾಮನ್ ನಿರ್ಧಾರಕ್ಕೆ ಬಂದಿದ್ದಾರೆ. ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಬರುತ್ತಾ ಅನ್ನುವ ನಿರೀಕ್ಷೆ ದೇಶಾದ್ಯಂತ ಇತ್ತು. ಕಳೆದ ನಾಲ್ಕು ತಿಂಗಳಿಂದ ಒಂದೇ ಸಮನೆ ತೈಲ ದರ ಏರಿಕೆ ಆಗಿದ್ದರಿಂದ ತೆರಿಗೆಯನ್ನು ಇಳಿಸಲೇಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು. ಜನ ಸಾಮಾನ್ಯರಿಗೂ ತೈಲ ದರ ಭಾರೀ ಹೊರೆ ಆಗಿರುವುದರಿಂದ ತೆರಿಗೆ ಇಳಿಸುವಂತೆ ಆಗ್ರಹ ಬಂದಿತ್ತು.
ಈ ನಡುವೆ, ಕೇರಳ ಹೈಕೋರ್ಟಿನಲ್ಲಿ ಇದೇ ವಿಚಾರದ ಅರ್ಜಿಯಲ್ಲಿ ವಿಚಾರಣೆ ನಡೆದು ಕೇಂದ್ರ ಸರಕಾರಕ್ಕೆ ನೋಟೀಸ್ ನೀಡಲಾಗಿತ್ತು. ಜಿಎಸ್ಟಿ ವ್ಯಾಪ್ತಿಗೆ ಯಾಕೆ ತರಲಾಗಿಲ್ಲ ಎಂದು ಪ್ರಶ್ನಿಸಿ, ಆರು ವಾರದಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿತ್ತು.
Finance Minister Nirmala Sitharaman is chairing the 45th Goods and Services Tax (GST) Council meeting today in Lucknow. The crucial meeting is expected to review over 50 items in the form of rate changes and clarifications.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm