ಬ್ರೇಕಿಂಗ್ ನ್ಯೂಸ್
09-09-20 03:20 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 9: ಮುಂಬೈನಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕಚೇರಿ ತೆರವುಗೊಳಿಸುತ್ತಿರುವುದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಕಚೇರಿ ತೆರವುಗೊಳಿಸುವ ಕ್ರಮವನ್ನು ಪ್ರಶ್ನಿಸಿ ಕಂಗಾನಾ ಪರ ವಕೀಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ತೆರವು ಕಾರ್ಯಾಚರಣೆಗೆ ತಡೆ ನೀಡಿದ್ದು, ಕಂಗನಾ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸರ್ಕಾರವನ್ನು ಕೇಳಿದೆ. ಈ ಮೂಲಕ ಕಂಗನಾ ಮಹಾ ಸರ್ಕಾರದ ವಿರುದ್ಧ ಬಹುದೊಡ್ಡ ಗೆಲುವು ಸಾಧಿಸಿದಂತಿದೆ.

ಇಂದು ಬೆಳಗ್ಗೆಯಷ್ಟೇ ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯಿಂದ ಹೊರಟ ಕಂಗನಾ ಮುಂಬೈಗೆ ಮರಳಿದ್ದಾರೆ. ಅವರು ಮುಂಬೈಗೆ ಆಗಮಿಸುವ ಮುಂಚೆಯೇ ಮಹಾ ಸರ್ಕಾರ ಕಚೇರಿಯ ತೆರವು ಕಾರ್ಯಾಚರಣೆ ನಡೆಸುತ್ತಿತ್ತು.
ಮುಂಬೈ ಅನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ತೊಡೆತಟ್ಟಿದ್ದಾರೆ. ಇಂದು ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ಕಂಗನಾ, ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಗೂಂಡಾಗಳು ಮುಂಬೈನಲ್ಲಿರುವ ನನ್ನ ಕಚೇರಿಯನ್ನು ಅಕ್ರಮವಾಗಿ ನೆಲಸಮ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.
ಸೋಮವಾರವಷ್ಟೇ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಚೇರಿಗೆ ಭೇಟಿ ನೀಡಿ, ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸೀಲ್ ಮಾಡಿದ್ದರು. ಅಲ್ಲದೆ, ಪರಿಶೀಲನೆ ಬಳಿಕ 14 ನಿಯಮ ಉಲ್ಲಂಘನೆಗಳ ಪಟ್ಟಿ ಸಹ ಮಾಡಿದ್ದರು. ನೆಲಸಮ ಮಾಡುವುದಾಗಿಯೂ ನೋಟಿಸ್ ಸಹ ಹೊರಡಿಸಿದ್ದರು.
ಸೋಮವಾರ ನೀಡಿದ್ದ ನೋಟೀಸ್ನಲ್ಲಿ ಹೇಗೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ನಮೂದಿಸಲಾಗಿತ್ತು. ಅಷ್ಟೇ ಅಲ್ಲ, 24 ಗಂಟೆಗಳಲ್ಲಿ ಈ ನೋಟೀಸ್ಗೆ ಉತ್ತರ ಕೊಡದಿದ್ದ ಪಕ್ಷದಲ್ಲಿ, ಅತಿಕ್ರಮವಾಗಿ ನಿರ್ಮಿಸಲಾದ ಭಾಗವನ್ನು ಒಡೆಯುವುದಾಗಿ ಈ ನೋಟೀಸ್ನಲ್ಲಿ ಹೇಳಲಾಗಿತ್ತು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm