ಬ್ರೇಕಿಂಗ್ ನ್ಯೂಸ್
21-09-21 05:28 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆ. 21: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಹೆಲಿಕಾಪ್ಟರ್ ಒಂದು ಪತನವಾಗಿದ್ದು, ಇಬ್ಬರು ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು. ಈ ಘಟನೆಯಲ್ಲಿ ಇಬ್ಬರು ಸೇನಾ ಪೈಲಟ್ಗಳು ಗಾಯಗೊಂಡಿದ್ದಾರೆ ಎಂದು ಕೂಡಾ ವರದಿಯಾಗಿತ್ತು. ಈಗ ಆ ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯು ತಿಳಿಸಿದೆ.
"ಸೇನಾ ಹೆಲಿಕಾಪ್ಟರ್ ಪತನವಾದ ಸಂದರ್ಭದಲ್ಲಿ ಇಬ್ಬರು ಪೈಲಟ್ಗಳು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಈ ಇಬ್ಬರು ಪೈಲಟ್ಗಳನ್ನು ರಕ್ಷಣೆ ಮಾಡಿದರು. ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಸಂದರ್ಭದಲ್ಲಿ ವೈದ್ಯರು ಪೈಲಟ್ಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ," ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಪತನವಾಗಿ ಧ್ವಂಸವಾಗಿರುವ ಹೆಲಿಕಾಪ್ಟರ್ ಕಣಿವೆ ಬದಿ ಬಿದ್ದಿರುವ ಹಾಗೂ ಸ್ಥಳೀಯರು ಪೈಲಟ್ಗಳನ್ನು ಹೊರಗೆ ಎಳೆಯುವ ಪ್ರಯತ್ನವನ್ನು ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಈ ಘಟನೆಯು ಇಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, "ಹೆಲಿಕಾಪ್ಟರ್ ಪತನದ ಸುದ್ದಿ ಕೇಳಿ ಆಘಾತ ಉಂಟಾಗಿದೆ," ಎಂದು ಹೇಳಿದ್ದಾರೆ.
ಇನ್ನು ಹೆಲಿಕಾಪ್ಟರ್ ಅನ್ನು ಗುಡ್ಡದ ಮೇಲೆ ಇಳಿಸುವಾಗ ತೊಂದರೆ ಉಂಟಾಗಿದೆ ಎಂದು ಕೂಡಾ ಹೇಳಲಾಗುತ್ತಿದೆ. ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಕತುವಾದ ರಂಜಿತ್ ಸಾಗರ್ ಡ್ಯಾಮ್ ಸಹೋವರದಲ್ಲಿ ಹೆಲಿಕಾಪ್ಟರ್ ಪತನವಾಗಿತ್ತು. ಪೈಲಟ್ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಪತ್ತೆ ಕಾರ್ಯಾಚರಣೆ ನಡೆಸಲಾಗಿತ್ತು.
Two pilots succumbed to their injuries after a helicopter of the Indian Army force-landed near Patnitop in Udhampur of Jammu and Kashmir on Tuesday. The pilots had been evacuated and rushed to a treatment facility, an army spokesperson said, adding further details were being ascertained.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm