ಬ್ರೇಕಿಂಗ್ ನ್ಯೂಸ್
21-09-21 05:28 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆ. 21: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಹೆಲಿಕಾಪ್ಟರ್ ಒಂದು ಪತನವಾಗಿದ್ದು, ಇಬ್ಬರು ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು. ಈ ಘಟನೆಯಲ್ಲಿ ಇಬ್ಬರು ಸೇನಾ ಪೈಲಟ್ಗಳು ಗಾಯಗೊಂಡಿದ್ದಾರೆ ಎಂದು ಕೂಡಾ ವರದಿಯಾಗಿತ್ತು. ಈಗ ಆ ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯು ತಿಳಿಸಿದೆ.
"ಸೇನಾ ಹೆಲಿಕಾಪ್ಟರ್ ಪತನವಾದ ಸಂದರ್ಭದಲ್ಲಿ ಇಬ್ಬರು ಪೈಲಟ್ಗಳು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಈ ಇಬ್ಬರು ಪೈಲಟ್ಗಳನ್ನು ರಕ್ಷಣೆ ಮಾಡಿದರು. ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಸಂದರ್ಭದಲ್ಲಿ ವೈದ್ಯರು ಪೈಲಟ್ಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ," ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಪತನವಾಗಿ ಧ್ವಂಸವಾಗಿರುವ ಹೆಲಿಕಾಪ್ಟರ್ ಕಣಿವೆ ಬದಿ ಬಿದ್ದಿರುವ ಹಾಗೂ ಸ್ಥಳೀಯರು ಪೈಲಟ್ಗಳನ್ನು ಹೊರಗೆ ಎಳೆಯುವ ಪ್ರಯತ್ನವನ್ನು ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಈ ಘಟನೆಯು ಇಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, "ಹೆಲಿಕಾಪ್ಟರ್ ಪತನದ ಸುದ್ದಿ ಕೇಳಿ ಆಘಾತ ಉಂಟಾಗಿದೆ," ಎಂದು ಹೇಳಿದ್ದಾರೆ.
ಇನ್ನು ಹೆಲಿಕಾಪ್ಟರ್ ಅನ್ನು ಗುಡ್ಡದ ಮೇಲೆ ಇಳಿಸುವಾಗ ತೊಂದರೆ ಉಂಟಾಗಿದೆ ಎಂದು ಕೂಡಾ ಹೇಳಲಾಗುತ್ತಿದೆ. ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಕತುವಾದ ರಂಜಿತ್ ಸಾಗರ್ ಡ್ಯಾಮ್ ಸಹೋವರದಲ್ಲಿ ಹೆಲಿಕಾಪ್ಟರ್ ಪತನವಾಗಿತ್ತು. ಪೈಲಟ್ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಪತ್ತೆ ಕಾರ್ಯಾಚರಣೆ ನಡೆಸಲಾಗಿತ್ತು.
Two pilots succumbed to their injuries after a helicopter of the Indian Army force-landed near Patnitop in Udhampur of Jammu and Kashmir on Tuesday. The pilots had been evacuated and rushed to a treatment facility, an army spokesperson said, adding further details were being ascertained.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm